ಯುವತಿ ಕುಟುಂಬಸ್ಥರಿಂದ ಪ್ರತಿಭಟನೆ 
ದೇಶ

ಕಾಂಜಾವಾಲ ಪ್ರಕರಣ: ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ತಿಳಿಸಿದ್ದಾರೆ.

ಕಾಂಜಾವಾಲ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 302 ಅಡಿ ಕೇಸ್ ದಾಖಲಿಸಲಿದ್ದಾರೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಕೋರ್ಟ್ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಆರೋಪಿಗಳಿಗೆ ಮರಣದಂಡನೆ ಅಥವಾ ಜೀವಾವಧಿಯ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.

ಪ್ರಕರಣದ ಏಳು ಆರೋಪಿಗಳ ಪೈಕಿ ಆರು ಮಂದಿಯ ಮೇಲೆ ಆರಂಭದಲ್ಲಿ ಕಲಂ 304 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಆದರೆ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು ಕಳೆದ ಮಂಗಳವಾರ ಸುಲ್ತಾನ್‌ಪುರಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?