ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 
ದೇಶ

ಕಾಶ್ಮೀರದ ಕೆಲ ಭಾಗಗಳಲ್ಲಿ ಪಾದಯಾತ್ರೆ ಮಾಡದಂತೆ ರಾಹುಲ್‌ ಗಾಂಧಿಗೆ ಭದ್ರತಾ ಪಡೆಗಳಿಂದ ಸಲಹೆ

ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕೆಲವು ಭಾಗಗಳಲ್ಲಿ ಪಾದಯಾತ್ರೆ ಮಾಡದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತಾ ಪಡೆಗಳು ಸಲಹೆ ನೀಡಿವೆ.

ನವದೆಹಲಿ: ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕೆಲವು ಭಾಗಗಳಲ್ಲಿ ಪಾದಯಾತ್ರೆ ಮಾಡದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತಾ ಪಡೆಗಳು ಸಲಹೆ ನೀಡಿವೆ.

ಕಣಿವೆಯಲ್ಲಿ ರಾಹುಲ್‌ ಗಾಂಧಿಯವರ ಸುರಕ್ಷತೆಗಾಗಿ ಭದ್ರತಾ ಪಡೆಗಳು ವಿಸ್ಕೃತವಾದ ಯೋಜನೆ ರೂಪಿಸಿದ್ದು, ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ನಡೆದು ಹೋಗುವುದಕ್ಕಿಂತ ಕಾರಿನಲ್ಲಿ ಪ್ರಯಾಣಿಸಿ ಎಂದು ಅವರಿಗೆ ಸಲಹೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಶ್ರೀನಗರದಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್‌ ಗಾಂಧಿ ಅವರೊಂದಿಗೆ ಬೆರಳೆಣಿಕೆಯಷ್ಟು ಜನ ಇರಲಿ ಎಂದು ಭದ್ರತಾ ಪಡೆಗಳು ಸಲಹೆ ನೀಡಿವೆ. ರಾಹುಲ್‌ ಗಾಂಧಿ ಅವರು ರಾತ್ರಿ ತಂಗುವ ಪ್ರದೇಶದಲ್ಲಿ ಭದ್ರತೆ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜನವರಿ 19 ರಂದು ಲಖನ್‌ಪುರ ಮಾರ್ಗವಾಗಿ ಕಾಶ್ಮೀರ ಪ್ರವೇಶಿಸಲಿದೆ. ಜನವರಿ 25 ರಂದು ಬನಿಹಾಲ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ. ಇದಾದ ಎರಡು ದಿನಗಳ ಬಳಿಕ ಅನಂತ್‌ನಾಗ್ ಮೂಲಕ ಯಾತ್ರೆ ಶ್ರೀನಗರಕ್ಕೆ ಪ್ರವೇಶ ಮಾಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT