ದೆಹಲಿಯಲ್ಲಿ ಕಂಡುಬಂದ ದೃಶ್ಯ 
ದೇಶ

ಉತ್ತರ ಭಾರತದಲ್ಲಿ ಮುಂದುವರಿದ ಶೀತಗಾಳಿ, ಚಳಿ: ರೈಲು, ವಿಮಾನ ಸೇವೆ ವ್ಯತ್ಯಯ, ರಾಜಸ್ತಾನದಲ್ಲಿ -4.7 ಡಿಗ್ರಿ

ಉತ್ತರ ಮತ್ತು ವಾಯುವ್ಯ ಭಾರತದ ಬಯಲು ಸೀಮೆಯಲ್ಲಿ ತೀವ್ರ ಚಳಿ ಗಾಳಿ ಬೀಸುತ್ತಿದ್ದು ದಟ್ಟ ಮಂಜು ಮುಸುಕಿದ ವಾತಾವರಣವಿದೆ, ಹಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 3 ರಿಂದ 5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. 

ನವದೆಹಲಿ: ಉತ್ತರ ಮತ್ತು ವಾಯುವ್ಯ ಭಾರತದ ಬಯಲು ಸೀಮೆಯಲ್ಲಿ ತೀವ್ರ ಚಳಿ ಗಾಳಿ ಬೀಸುತ್ತಿದ್ದು ದಟ್ಟ ಮಂಜು ಮುಸುಕಿದ ವಾತಾವರಣವಿದೆ, ಹಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 3 ರಿಂದ 5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇದೇ ರೀತಿಯ ಹವಾಮಾನ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ವಾಯುವ್ಯ ಭಾರತದ ರಾಜಸ್ತಾನದ ಸಿಕರ್ ಜಿಲ್ಲೆಯ ಫತೇಪುರದಲ್ಲಿ -4.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ. ಪಂಜಾಬ್‌ನ ಫರೀದ್‌ಕೋಟ್ ಮೈನಸ್ ಒಂದು ಡಿಗ್ರಿ ಸೆಲ್ಸಿಯಸ್‌ ಇದ್ದು ಜನರು ಚಳಿಗೆ ತತ್ತರಿಸಿ ಹೋಗಿದ್ದಾರೆ. 

ಪಂಜಾಬ್, ರಾಜಸ್ಥಾನ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ತೀವ್ರ ಶೀತ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯವ್ಯ ಮತ್ತು ಆಗ್ನೇಯ ರಾಜಸ್ತಾನದ ಹಲವು ಭಾಗಗಳಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.

ಪಂಜಾಬ್, ಹರಿಯಾಣ, ದೆಹಲಿ ಮತ್ತು ನೈಋತ್ಯ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. ಭಾರತ ಹವಾಮಾನ ಇಲಾಖೆ (IMD) ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಥಾರ್ ಮರುಭೂಮಿಯ ಸಮೀಪದಲ್ಲಿರುವ ಚುರುವಿನಲ್ಲಿ ಕನಿಷ್ಠ ಕನಿಷ್ಠ ತಾಪಮಾನ ಮೈನಸ್ 2.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 

ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯದಲ್ಲಿ ತಾಪಮಾನ 4.7 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಶೀತದ ಅಲೆಯು ಕನಿಷ್ಠ ತಾಪಮಾನವು ಜಾಫರ್‌ಪುರದಲ್ಲಿ 2.6 ಡಿಗ್ರಿ ಸೆಲ್ಸಿಯಸ್, ಲೋಧಿ ರಸ್ತೆಯಲ್ಲಿ 3.8 ಡಿಗ್ರಿ ಸೆಲ್ಸಿಯಸ್, ಅಯಾನಗರದಲ್ಲಿ 3 ಡಿಗ್ರಿ ಸೆಲ್ಸಿಯಸ್ ಮತ್ತು ರಾಷ್ಟ್ರ ರಾಜಧಾನಿಯ ರಿಡ್ಜ್‌ನಲ್ಲಿ 3.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

IMD ಅಂಕಿಅಂಶಗಳ ಪ್ರಕಾರ, ದೆಹಲಿಯು ಜನವರಿ 5 ರಿಂದ ಜನವರಿ 9 ರವರೆಗೆ ತೀವ್ರವಾದ ಶೀತ ಅಲೆಯನ್ನು ಕಂಡಿತು, ಇದು ಒಂದು ದಶಕದಲ್ಲಿ ಜನವರಿ ತಿಂಗಳಲ್ಲಿ ಇಷ್ಟೊಂದು ದೀರ್ಘಕಾಲದವರೆಗೆ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ. ಪಂಜಾಬ್, ಅಮೃತಸರದಲ್ಲಿ ಕನಿಷ್ಠ 1.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಲೂಧಿಯಾನ, ಪಟಿಯಾಲ, ಪಠಾಣ್‌ಕೋಟ್, ಬಟಿಂಡಾ ಮತ್ತು ಗುರುದಾಸ್‌ಪುರ್‌ಗಳಲ್ಲಿ ಕ್ರಮವಾಗಿ 4.9, 4.2, 8, 1 ಮತ್ತು 3.7 ಡಿಗ್ರಿ ಸೆಲ್ಸಿಯಸ್‌ನಲ್ಲಿ ಶೀತ ಹವಾಮಾನದ ಅನುಭವವಾಗಿದೆ.

ಪಂಜಾಬ್ ಮತ್ತು ಹರಿಯಾಣದ ಸಾಮಾನ್ಯ ರಾಜಧಾನಿಯಾದ ಕೇಂದ್ರಾಡಳಿತ ಪ್ರದೇಶ ಚಂಡೀಗಢದಲ್ಲಿ 6.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಪೂರ್ವ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ವಾಯುವ್ಯ ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನವು 4-7 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿದಿದೆ ಎಂದು IMD ಹೇಳಿಕೆಯಲ್ಲಿ ತಿಳಿಸಿದೆ, ವಾಯುವ್ಯ ಭಾರತದ ಉಳಿದ ಭಾಗಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ.

ಜನವರಿ 17-18 ರವರೆಗೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುವ ಸಾಧ್ಯತೆಯಿದೆ ಮತ್ತು ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಶೀತ ಅಲೆಯಿಂದ ತೀವ್ರ ಶೀತ ಅಲೆಯ ಪರಿಸ್ಥಿತಿಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಬ್ಯೂರೋ ಹೇಳಿದೆ. 

ಜನವರಿ 16 ರಿಂದ 18 ರವರೆಗೆ ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಗ್ರೌಂಡ್ ಫ್ರಾಸ್ಟ್ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಕಾಶ್ಮೀರದ ಹೆಚ್ಚಿನ ಸ್ಥಳಗಳಲ್ಲಿ ರಾತ್ರಿಯ ತಾಪಮಾನವು ಘನೀಕರಿಸುವ ಹಂತಕ್ಕಿಂತ ಕಡಿಮೆಯಾಗಿದೆ, ಆದರೆ ಶುಷ್ಕ ಹವಾಮಾನದ ದೃಷ್ಟಿಯಿಂದ ಮುಂದಿನ ಕೆಲವು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಮತ್ತಷ್ಟು ಕುಸಿತವನ್ನು ಹವಾಮಾನ ಕಚೇರಿ ಮುನ್ಸೂಚನೆ ನೀಡಿದ್ದರೂ, ಶ್ರೀನಗರದಲ್ಲಿ ಮೊನ್ನೆ ಶನಿವಾರ ರಾತ್ರಿ ಕನಿಷ್ಠ ಮೈನಸ್ 0.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಗಡಿ ಜಿಲ್ಲೆಯ ಕುಪ್ವಾರದಲ್ಲಿ ಕನಿಷ್ಠ ಮೈನಸ್ 1.3 ಡಿಗ್ರಿ ಸೆಲ್ಸಿಯಸ್‌, ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮೈನಸ್ 10.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲಾದ ಅತ್ಯಂತ ಶೀತ ಪ್ರದೇಶವಾಗಿದೆ.

ಉತ್ತರ ಮತ್ತು ವಾಯುವ್ಯ ಭಾರತದಲ್ಲಿ ಜನವರಿ 10-11 ರವರೆಗೆ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗಿದೆ. 

ಬುಧವಾರದವರೆಗೆ ಮುಂದುವರಿಕೆ: ತೀವ್ರ ಚಳಿ ಗಾಳಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಬುಧವಾರದವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರೈಲು ಸೇವೆಯಲ್ಲಿ ವ್ಯತ್ಯಯ: ದೆಹಲಿ-ಎನ್ ಸಿಆರ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 3 ಡಿಗ್ರಿಯವರೆಗೆ ಇಳಿಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಜನವರಿ 18ರಂದು ತಾಪಮಾನ 4 ಡಿಗ್ರಿ ಸೆಲ್ಸಿಯಸ್ ಗೆ ಇಳಿಯಲಿದ್ದು ಜನರು ಚಳಿಗೆ ಮತ್ತಷ್ಟು ಗಡಗಡ ನಡುಗಲಿದ್ದಾರೆ. ಇಂದು ಉತ್ತರ ರೈಲ್ವೆ ಭಾಗದಲ್ಲಿ ಸಂಚರಿಸುವ ಸುಮಾರು 13 ರೈಲುಗಳ ಸೇವೆಯಲ್ಲಿ ದಟ್ಟ ಮಂಜು ಆವೃತವಾಗಿರುವುದರಿಂದ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.    

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT