ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಬಂಡಿ ಸಂಜಯ್ ಭಾಷಣ 
ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ಎಲ್ಲಾ ರಾಜ್ಯಗಳು ಇವರಿಂದ ಕಲಿಯಿರಿ ಎಂದ ಪ್ರಧಾನಿ ಮೋದಿ!

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಸೋಮವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಆಕರ್ಷಣೆಯ ಕೇಂದ್ರಬಿಂದುವಾದರು. ಅವರ ಪ್ರಜಾ ಸಂಗ್ರಾಮ ಯಾತ್ರೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಅವರಿಂದ ಕಲಿಯುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದರು.

ನವದೆಹಲಿ: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಸೋಮವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಆಕರ್ಷಣೆಯ ಕೇಂದ್ರಬಿಂದುವಾದರು. ಅವರ ಪ್ರಜಾ ಸಂಗ್ರಾಮ ಯಾತ್ರೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಅವರಿಂದ ಕಲಿಯುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದರು. ಹೋರಾಟಗಳೊಂದಿಗೆ ಅವರು ಯಾವ ರೀತಿ ಈ ಯಾತ್ರೆ ಪೂರ್ಣಗೊಳಿಸಿದ್ದಾರೆ   ಎಂಬುದನ್ನು ಮೋದಿ ಶ್ಲಾಘಿಸಿದರು.

ರಾಷ್ಟ್ರೀಯ ಕಾರ್ಯಕಾರಣಿಯ ಮೊದಲ ದಿನ ಪ್ರಜಾ ಸಂಗ್ರಾಮ ಯಾತ್ರೆ ಬಗ್ಗೆ ಬಂಡಿ ಸಂಜಯ್ ಪ್ರಸ್ತುತಪಡಿಸಿದರು. ಒಂದು ತಾಸು ಇದೇ ವಿಚಾರವಾಗಿ ಮಾತನಾಡಿದ ಅವರು, ಅಡೆತಡೆಗಳ ನಡುವೆಯೂ ತಾವು ಈ ರೀತಿಯಲ್ಲಿ ಈ ಯಾತ್ರೆಯನ್ನು ಪೂರ್ಣಗೊಳಿಸಿದ್ದಾಗಿ ವಿವರಿಸಿದರು.

ಬಂಡಿ ಸಂಜಯ್ ಹಿಂದಿ ಭಾಷೆಯಲ್ಲಿ ಮಾತನಾಡಲು ಆರಂಭಿಸಿದಾದರೂ ಅವರ ಮಾತೃ ಭಾಷೆ ತೆಲುಗಿನಲ್ಲಿ ವಿವರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರೇ ತಿಳಿಸಿದರು. ಭಾಷೆಗಳು ಯಾವುದೇ ಅಡ್ಡಿಯನ್ನುಂಟು ಮಾಡಲ್ಲ ಎಂದರು. ಆದಾಗ್ಯೂ, ತದನಂತರ ಬಂಡಿ ಸಂಜಯ್ ಅವರ ತೆಲುಗು ಭಾಷಣವನ್ನು ತರುಣ್ ಚುಗ್ ತರ್ಜುಮೆ ಮಾಡಿದರು. 

ಈ ಯಾತ್ರೆಯನ್ನು ಐದು ಹಂತಗಳಲ್ಲಿ ಕೈಗೊಳ್ಳಲಾಗಿದ್ದು, 116 ದಿನಗಳಲ್ಲಿ 18 ಜಿಲ್ಲೆಗಳಲ್ಲಿನ 11 ವಿಧಾನಸಭಾ ಕ್ಷೇತ್ರ ಹಾಗೂ 6 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಜನರೊಂದಿಗೆ ಸಂವಾದ, ಸಾರ್ವಜನಿಕ ಸಭೆ, ದೇವಾಲಯ, ಸಾರ್ವಜನಿಕ ಸಭೆ, ವಿಷಯಾಧಾರಿತ ಸಭೆಗಳನ್ನು ನಡೆಸಲಾಗಿದೆ ಎಂದು ಬಂಡಿ ಸಂಜಯ್ ತಿಳಿಸಿದರು.

9,776 ಜನರನ್ನು ವೆಬ್ ಸೈಟ್ ನಲ್ಲಿ ಸೇರಿಸಿಕೊಳ್ಳಲಾಗಿದೆ. ಯಾತ್ರೆ ಸೇರಲು 42, 940 ಮಿಸ್ಡ್ ಕರೆಗಳು ಬಂದಿರುವುದಾಗಿ ಅವರು ತಿಳಿಸಿದರು. ಆದಾಗ್ಯೂ, ಬಂಡಿ ಸಂಜಯ್ ಶೀಘ್ರದಲ್ಲಿಯೇ ಬಸ್ ಯಾತ್ರೆ ಆರಂಭಿಸಲು ಸಿದ್ಧತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT