ಇಂಡಿಗೋ ವಿಮಾನ ಮತ್ತು ತೇಜಸ್ವಿ ಸೂರ್ಯ 
ದೇಶ

ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶ

ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ.

ನವದೆಹಲಿ: ಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ.

ಇಂಡಿಗೋ ಏರ್‌ಲೈನ್ಸ್ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಒಂದು ತಿಂಗಳ ಹಿಂದೆ ಚೆನ್ನೈನಿಂದ ತಿರುಚಿರಾಪಳ್ಳಿಗೆ ಪ್ರಯಾಣಿಕನೊಬ್ಬ ಇಂಡಿಗೋ ಫ್ಲೈಟ್ 6E 7339 ರಲ್ಲಿ ATR ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ಅನ್ಲಾಕ್ ಮಾಡಿದ್ದರು ಎನ್ನಲಾಗಿದೆ. 

ತುರ್ತು ನಿರ್ಗಮನ ದ್ವಾರವನ್ನು ಅನ್ಲಾಕ್ ಮಾಡಿದ ಪ್ರಯಾಣಿಕ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಡಿಜಿಸಿಎ ಅಥವಾ ಇಂಡಿಗೋ ವಿಮಾನ ಸಂಸ್ಥೆ ಯಾವುದೇ ಸ್ಪಷ್ಟನೆ ನೀಡಿಲ್ಲ. 

ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಗುರುತು ಅಥವಾ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಬೇಕಾಗಿಲ್ಲದ ಕಾರಣ ಪತ್ರಿಕಾ ಹೇಳಿಕೆಯು ಸಂಸದರನ್ನು ಹೆಸರಿಸದಿದ್ದರೂ, ಪ್ರಯಾಣಿಕರು ತಮ್ಮ ಕ್ರಮಕ್ಕಾಗಿ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಪ್ರಕಾರ, ಘಟನೆಯನ್ನು ವರದಿ ಮಾಡಲಾಗಿದೆ ಮತ್ತು ಘಟನೆ ಬಳಿಕ ವಿಮಾನವನ್ನು ಕಡ್ಡಾಯವಾಗಿ ಇಂಜಿನಿಯರಿಂಗ್ ತಪಾಸಣೆಗೆ ಒಳಪಡಿಸಲಾಯಿತು.. ಬಳಿಕ ಸುರಕ್ಷತೆ ಕುರಿತು ತಜ್ಞರು ವರದಿ ನೀಡಿದ ಬಳಿಕವೇ ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು. ಇದು ವಿಮಾನದ ವಿಳಂಬಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. 

ಚೆನ್ನೈನಿಂದ ತಿರುಚ್ಚಿಗೆ ಹಾರುತ್ತಿದ್ದ ATR 72-600 ವಿಮಾನವು ಬೆಳಿಗ್ಗೆ 10.05 ಕ್ಕೆ ಟೇಕ್ ಆಫ್ ಆಗಬೇಕಿತ್ತು ಆದರೆ ಎರಡು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ  ಡಿಜಿಸಿಎ ತನಿಖೆಗೆ ಆದೇಶಿಸಿದ್ದು, ಅಲ್ಲದೆ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT