ಅಮಿತಾಬ್ ಕಾಂತ್ 
ದೇಶ

ನೀರಿನ ಬಳಕೆ ಕಡಿಮೆ ಮಾಡಲು ರೈತರು ಭತ್ತದ ಬದಲು ಸಿರಿಧಾನ್ಯ ಬೆಳೆಯಬೇಕು: ಅಮಿತಾಬ್ ಕಾಂತ್

ಹೆಚ್ಚಿನ ನೀರಿನ ಬಳಕೆಯನ್ನು ಕಡಿಮೆ ಮಾಡಲು ಭಾರತೀಯ ರೈತರು ಭತ್ತದ ಬದಲು ಸಿರಿಧಾನ್ಯ ಕೃಷಿಗೆ ಬದಲಾಗಬೇಕಾಗಿದೆ ಕೇಂದ್ರದ ಪ್ರಮುಖ ಪೋಷಣ ಅಭಿಯಾನದಲ್ಲಿ ಸಿರಿಧಾನ್ಯ ಮಾತ್ರ ನೀಡಬೇಕು...

ನವದೆಹಲಿ: ಹೆಚ್ಚಿನ ನೀರಿನ ಬಳಕೆಯನ್ನು ಕಡಿಮೆ ಮಾಡಲು ಭಾರತೀಯ ರೈತರು ಭತ್ತದ ಬದಲು ಸಿರಿಧಾನ್ಯ ಕೃಷಿಗೆ ಬದಲಾಗಬೇಕಾಗಿದೆ ಕೇಂದ್ರದ ಪ್ರಮುಖ ಪೋಷಣ ಅಭಿಯಾನದಲ್ಲಿ ಸಿರಿಧಾನ್ಯ ಮಾತ್ರ ನೀಡಬೇಕು ಎಂದು ಭಾರತದ ಜಿ20 ಶೆರ್ಪಾ ಅಮಿತಾಬ್ ಕಾಂತ್ ಅವರು ಬುಧವಾರ ಹೇಳಿದ್ದಾರೆ.

ಉದ್ಯಮ ಸಂಸ್ಥೆ ಸಿಐಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಂತ್, ಸಿರಿಧಾನ್ಯಗಳು ಪೌಷ್ಟಿಕಾಂಶ ವಿಶೇಷವಾಗಿ ಪ್ರೋಟೀನ್ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ಹೆಚ್ಚು ಹೊಂದಿವೆ. ದೇಶದಲ್ಲಿ ಸಿರಿಧಾನ್ಯ ಸೇವನೆಯನ್ನು ಉತ್ತೇಜಿಸಬೇಕು ಎಂದಿದ್ದಾರೆ.

"ಭಾರತವು ಭತ್ತ ಮತ್ತು ಗೋಧಿ ಕೃಷಿಯಿಂದ ದೂರ ಸರಿಯಬೇಕು ಮತ್ತು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಉತ್ಪಾದಿಸಿ ರಫ್ತು ಮಾಡಬೇಕಾಗಿದೆ. ಸಿರಿಧಾನ್ಯ ಕೃಷಿಯು ನೀರನ್ನು ಉಳಿಸಲು ಸಹಾಯ ಮಾಡುತ್ತದೆ" ಎಂದು ಅವರು ಹೇಳಿದ್ದಾರೆ.

ಸಿರಿಧಾನ್ಯ ಭಾರತದ ಸೂಪರ್‌ಫುಡ್ ಮಾಡುವಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುವ ಅಗತ್ಯವಿದೆ. ಕೇಂದ್ರ ಸರ್ಕಾರದ ಎಲ್ಲಾ ಪೋಷಣ ಅಭಿಯಾನ ಯೋಜನೆಗಳಲ್ಲಿ ಸಿರಿಧಾನ್ಯವನ್ನು ಮಾತ್ರ ನೀಡಬೇಕು ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT