ನಿತೀಶ್ ಕುಮಾರ್ 
ದೇಶ

ನನಗಿರುವುದು ಒಂದೇ ಕನಸು: ಕೆಸಿಆರ್ ನೇತೃತ್ವದ ವಿಪಕ್ಷಗಳ ರ‍್ಯಾಲಿ ಬಳಿಕ ನಿತೀಶ್ ಬಿಚ್ಚಿಟ್ಟ ಮನದಾಳದ ಮಾತು...

ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ‍್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 

ಪಾಟ್ನ: ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ‍್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. 

ನನಗೆ ಒಂದೇ ಒಂದು ಕನಸಿದೆ, ಅದು ತನಗಾಗಿ ಅಲ್ಲ, ಬದಲಾಗಿ ವಿಪಕ್ಷಗಳ ನಾಯಕರು ಒಗ್ಗಟ್ಟಾಗಿ ಮುನ್ನಡೆಯುವುದೇ ನನ್ನ ಕನಸಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ತೆಲಂಗಾಣದ ಖಮ್ಮಮ್ ನಲ್ಲಿ ಕೆಸಿಆರ್ ನೇತೃತ್ವದಲ್ಲಿ ಪ್ರಮುಖ ವಿಪಕ್ಷಗಳ ನಾಯಕರು ಭಾಗವಹಿಸಿದ್ದರ ಬೆನ್ನಲ್ಲೇ ನಿತೀಶ್ ಕುಮಾರ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
 
ಈ ರ‍್ಯಾಲಿಗೆ ನೀವೇ ಹೋಗಿರಲಿಲ್ವಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ನಿತೀಶ್ ಕುಮಾರ್, ನನಗೆ ಕೆಸಿಆರ್ ಅವರ ರ‍್ಯಾಲಿ ಬಗ್ಗೆ ತಿಳಿದಿರಲಿಲ್ಲ. ನಾನು ಬೇರೆ ಕೆಲಸಗಳಲ್ಲಿ ವ್ಯಸ್ತನಾಗಿದ್ದೆ. ಆ ರ‍್ಯಾಲಿಗೆ ಆಹ್ವಾನವಿದ್ದವರು ಹೋಗಿದ್ದಿರಬಹುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಎಡಪಕ್ಷಗಳ ನಾಯಕರಾದ ಪಿಣರಾಯಿ ವಿಜಯನ್, ಡಿ ರಾಜ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ನಾಯಕರ್ಯಾರೂ ಈ ಸಭೆಯಲ್ಲಿ ಭಾಗಿಯಾಗಿರಲಿಲ್ಲ.
 
ಕೆಸಿಆರ್ ನೇತೃತ್ವದ ಈ ರ‍್ಯಾಲಿಯನ್ನು 2024 ರ ರಾಷ್ಟ್ರೀಯ ಚುನಾವಣೆಗೆ ಕಾಂಗ್ರೆಸ್ಸೇತರ ವಿಪಕ್ಷಗಳ ಒಕ್ಕೂಟದ ಕಾರ್ಯಕ್ರಮವೆಂದೇ ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT