ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ 
ದೇಶ

ಕಳಸಾ-ಬಂಡೂರಿ ವಿಸ್ತೃತ ಯೋಜನೆ ವಿರೋಧಿಸಿ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಪಣಜಿ: ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಗೋವಾ ವಿಧಾನಸಭೆಯಲ್ಲಿ ಗುರುವಾರ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುದೀರ್ಘ ಆರು ಗಂಟೆಗಳ ಚರ್ಚೆಯ ನಂತರ ತಡರಾತ್ರಿ ನಿರ್ಣಯ ಅಂಗೀಕರಿಸಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯೂರಿ ಅಲೆಮಾವೊ ಅವರು, ಅಂತರರಾಜ್ಯ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರೆ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಹದಾಯಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ನ್ಯಾಯಯುತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಮಹದಾಯಿ ಸಮಸ್ಯೆಯನ್ನು ಅಸ್ತ್ರಗೊಳಿಸಿದೆ ಮತ್ತು ಈಗ ಅದನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ’ ಎಂದು ಅಲೆಮಾವೊ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ