ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ 
ದೇಶ

ಕಳಸಾ-ಬಂಡೂರಿ ವಿಸ್ತೃತ ಯೋಜನೆ ವಿರೋಧಿಸಿ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಪಣಜಿ: ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಗೋವಾ ವಿಧಾನಸಭೆಯಲ್ಲಿ ಗುರುವಾರ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುದೀರ್ಘ ಆರು ಗಂಟೆಗಳ ಚರ್ಚೆಯ ನಂತರ ತಡರಾತ್ರಿ ನಿರ್ಣಯ ಅಂಗೀಕರಿಸಲಾಯಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯೂರಿ ಅಲೆಮಾವೊ ಅವರು, ಅಂತರರಾಜ್ಯ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರೆ, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಹದಾಯಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ನ್ಯಾಯಯುತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಮಹದಾಯಿ ಸಮಸ್ಯೆಯನ್ನು ಅಸ್ತ್ರಗೊಳಿಸಿದೆ ಮತ್ತು ಈಗ ಅದನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ’ ಎಂದು ಅಲೆಮಾವೊ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ