ಸಂಗ್ರಹ ಚಿತ್ರ 
ದೇಶ

ಪತ್ನಿ ಮೇಲೆ ಕೋಪ: ಬುದ್ದಿ ಕಲಿಸಲು 'ಅದನ್ನೇ' ಕತ್ತರಿಸಿಕೊಂಡ ಪತಿ!

ಪತ್ನಿ ಮೇಲಿನ ಕೋಪಕ್ಕೆ ವ್ಯಕ್ತಿಯೋರ್ವ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಮಾಧೇಪುರ(ಬಿಹಾರ): ಪತ್ನಿ ಮೇಲಿನ ಕೋಪಕ್ಕೆ ವ್ಯಕ್ತಿಯೋರ್ವ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಮುರಳಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪತ್ನಿ ತಿಳಿಸದೆ ತನ್ನ ತಾಯಿಯ ಮನೆಗೆ ಹೋಗಿದ್ದರಿಂದ ಕೋಪಗೊಂಡ 27 ವರ್ಷದ ಕೃಷ್ಣ ಬಸುಕಿ ಎಂಬಾತ ಖಾಸಗಿ ಅಂಗವನ್ನು ಕತ್ತರಿಸಿ ಕುಲದೇವತೆಗೆ ಅರ್ಪಿಸಿದ್ದಾನೆ. ಈ ಘಟನೆಯ ಬಳಿಕ ಕೃಷ್ಣನನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪತ್ನಿ ತನಗೆ ಹೇಳದೆ ತವರು ಮನೆಗೆ ಹೋಗಿರುವ ವಿಷಯ ಶುಕ್ರವಾರ ತಡರಾತ್ರಿ ಕೃಷ್ಣಾ ಬಸುಕಿಗೆ ತಿಳಿಯಿತು. ಇದರಿಂದ ಕೋಪಗೊಂಡ ಆತ ಹರಿತವಾದ ಆಯುಧದಿಂದ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾನೆ. ಇದರ ನಂತರ, ಕತ್ತರಿಸಿದ ಖಾಸಗಿ ಭಾಗವನ್ನು ಸ್ವಂತ ಕುಲದೇವತೆಯ ಸ್ಥಳದಲ್ಲಿ ಅರ್ಪಿಸಿದ್ದಾನೆ.

ಕೃಷ್ಣ ಬಸುಕಿ ಪಂಜಾಬ್‌ನ ಮಂಡಿಯಲ್ಲಿ ನೆಲೆಸಿದ್ದು ಅಲ್ಲೇ ಕೆಲಸ ಮಾಡುತ್ತಾ ಕುಟುಂಬವನ್ನು ಪೋಷಿಸುತ್ತಿದ್ದನು ಎಂದು ಸಂಬಂಧಿಕರು ತಿಳಿಸಿದ್ದಾರೆ. ಕೃಷ್ಣಾಗೆ ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರ ಜನಿಸಿದ್ದಾರೆ. ಮೂರು ತಿಂಗಳ ಹಿಂದೆಯಷ್ಟೇ ಮಗ ಜನಿಸಿದ್ದ. ಎರಡು ತಿಂಗಳ ಹಿಂದಷ್ಟೇ ಪಂಜಾಬ್ ನಿಂದ ಕೃಷ್ಣ ಬಾಸುಕಿ ಮನೆಗೆ ಬಂದಿದ್ದನು ಎನ್ನಲಾಗಿದೆ. 

ಮತ್ತೊಂದೆಡೆ, ಕೃಷ್ಣ ಬಸುಕಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜನ್ನಾಯಕ್ ಕರ್ಪೂರಿ ಠಾಕೂರ್ ವೈದ್ಯಕೀಯ ಕಾಲೇಜಿನ ವೈದ್ಯ ಡಾ.ಸಂತೋಷ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT