ಹಾತ್ ಸೆ ಹಾತ್ ಜೋಡೋ ಮತ್ತು ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ 
ದೇಶ

'ಹಾತ್ ಸೆ ಹಾತ್ ಜೋಡೋ ಅಭಿಯಾನ್' ಲಾಂಛನ ಮತ್ತು ಮೋದಿ ಸರ್ಕಾರ ವಿರುದ್ಧ 'ಚಾರ್ಜ್ ಶೀಟ್' ಬಿಡುಗಡೆ ಮಾಡಿದ ಕಾಂಗ್ರೆಸ್

'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ನವದೆಹಲಿ: 'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೈ ನಾಯಕರು ಇದೇ 26ರಿಂದ 2 ತಿಂಗಳು ಹಾತ್ ಸೆ ಹಾತ್ ಜೋಡೋ ಅಭಿಯಾನ ನಡೆಯಲಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಬಗ್ಗೆ ಮನೆಮನೆಗೆ ಸಂದೇಶ ಸಾರಲು  ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಮೋದಿ ಸರ್ಕಾರ ವಿರುದ್ಧ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಾಯಕರು, ಆಯಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಆಯಾ ರಾಜ್ಯಗಳ ವಿರುದ್ಧವೂ ಅಗತ್ಯವಿದ್ದರೆ ಚಾರ್ಜ್ ಶೀಟ್ ತಯಾರಿಸುತ್ತದೆ ಎಂದರು. ಮೋದಿ ಸರ್ಕಾರದ ದುರಾಡಳಿತದಿಂದ ದೇಶದ ಜನರು ತೊಂದರೆ, ಸಮಸ್ಯೆ ಅನುಭವಿಸುತ್ತಿದ್ದು ಅವರ ಸಮಸ್ಯೆಗಳಿಗೆ ದನಿಯಾಗುತ್ತೇವೆ ಎಂದರು.

ಇಂದು ಸುದ್ದಿಗೋಷ್ಠಿಯಲ್ಲಿ ವೇಣುಗೋಪಾಲ್ ಹೇಳಿದ್ದೇನು?: 130 ದಿನಗಳ ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಪಕ್ಷ ದೇಶದ ಎಲ್ಲಾ ವರ್ಗದ ಜನತೆಯಿಂದ ಸಾಕಷ್ಟು ಮಾಹಿತಿ ಪಡೆದಿದ್ದಾರೆ. ಲಕ್ಷಾಂತರ ಮಂದಿಯ ಜೊತೆ ನಡೆದುಕೊಂಡು ಹೋಗುವಾಗ ರಾಹುಲ್ ಗಾಂಧಿಯವರು ಜನರ ಹಲವು ಕಷ್ಟಗಳು, ಸಮಸ್ಯೆಗಳನ್ನು ಕೇಳಿದ್ದಾರೆ. ಮೋದಿ ಸರ್ಕಾರದ ದುರಾಡಳಿತದಿಂದ ಜನರು ಅನುಭವಿಸುತ್ತಿರುವ ನೋವು ನಮಗೆ ಅರ್ಥವಾಗುತ್ತಿದೆ ಎಂದರು.

ಇಂದು ಜಮ್ಮು-ಕಾಶ್ಮೀರದ ಕತುವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈರಾಂ ರಮೇಶ್, ಮನೆಮನೆಗೆ ಕಾಂಗ್ರೆಸ್ ನ ಪ್ರಚಾರ 6 ಲಕ್ಷ ಹಳ್ಳಿಗಳ ಮತ್ತು 2.5 ಲಕ್ಷ ಗ್ರಾಮ ಪಂಚಾಯತ್ ಗಳ 10 ಲಕ್ಷ ಮತಗಟ್ಟೆಗಳಿಗೆ ಮನೆ ಮನೆಗೆ ತಲುಪುತ್ತೇವೆ ಎಂದರು.

ಹಾತ್ ಸೆ ಹಾತ್ ಜೋಡೋ ಅಭಿಯಾನವನ್ನು ಕಾಂಗ್ರೆಸ್ ಜನವರಿ 26ರಿಂದ ಮಾರ್ಚ್ 26ರವರೆಗೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ಪ್ರಚಾರ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT