ನಾರಾಯಣ ಪಟೇಲ್ 
ದೇಶ

ಅಪಘಾತಗಳಿಗೆ ಉತ್ತಮ ರಸ್ತೆಗಳು ಪ್ರಮುಖ ಕಾರಣ: ಬಿಜೆಪಿ ಶಾಸಕ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮೆರಿಕಕ್ಕೆ ಹೋಗಿ ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರೊಬ್ಬರು ಉತ್ತಮ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮೆರಿಕಕ್ಕೆ ಹೋಗಿ ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರೊಬ್ಬರು ಉತ್ತಮ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. 

ಖಾಂಡ್ವಾದ ಮಂಧಾತಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಾರಾಯಣ್ ಪಟೇಲ್, ಉತ್ತಮ ರಸ್ತೆಗಳಿಂದಾಗಿ ಜನರು ವೇಗವಾಗಿ ಓಡಿಸುತ್ತಾರೆ. ಅತಿವೇಗದಲ್ಲಿ ವಾಹನ ಚಲಾಯಿಸುವುದರಿಂದ ನಿಯಂತ್ರಣಕ್ಕೆ ಬಾರದೆ ಅಪಘಾತವಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ ಅಂತಹ ಅನುಭವ ತಮಗೂ ಆಗಿದೆ ಎಂದು ಹೇಳಿದರು.

ದೇಶದಲ್ಲಿ ಉತ್ತಮ ರಸ್ತೆಗಳಿವೆ ಬಿಜೆಪಿ ಶಾಸಕ ನಂಬುತ್ತಾರೆ. ಇದು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಇದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ವಾಸ್ತವವಾಗಿ, ಕಳೆದ ಒಂದು ವಾರದಿಂದ ಖಾಂಡ್ವಾದಲ್ಲಿ ಅಪಘಾತಗಳ ಘಟನೆಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ ಎಂದರು.

ಇತ್ತೀಚಿನ ದಿನಗಳಲ್ಲಿ ರಸ್ತೆಗಳು ಚೆನ್ನಾಗಿವೆ. ಅದರಲ್ಲೂ ನನ್ನ ಕ್ಷೇತ್ರದಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಗಳು ಉತ್ತಮವಾಗಿವೆ, ವಾಹನಗಳು ಅತಿವೇಗದಲ್ಲಿ ಓಡುತ್ತವೆ, ಅತಿ ವೇಗದ ವಾಹನವು ಯಾವುದೇ ಸಮಯದಲ್ಲಿ ಅನಿಯಂತ್ರಿತವಾಗಬಹುದು ಎಂದು ನಾನು ಅನುಭವಿಸಿದ್ದೇನೆ. ಅದಕ್ಕಾಗಿಯೇ ಈ ರೀತಿಯ ಪರಿಸ್ಥಿತಿ ಉದ್ಭವಿಸುತ್ತದೆ. ಅಷ್ಟೇ ಅಲ್ಲ, ಕೆಲ ಚಾಲಕರು ಕುಡಿದ ಅಮಲಿನಲ್ಲಿ ವಾಹನಗಳನ್ನು ಓಡಿಸುತ್ತಾರೆಯೇ ಹೊರತು ಎಲ್ಲರೂ ಅಲ್ಲ. ಕುಡಿದ ಅಮಲಿನಲ್ಲಿ ವಾಹನಗಳನ್ನು ಓಡಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶದ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಇದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಜನವರಿ 1 ರಿಂದ ಖಾಂಡ್ವಾದಲ್ಲಿ ನಾಲ್ಕು ಪ್ರಮುಖ ಬಸ್ ಅಪಘಾತಗಳು ಸಂಭವಿಸಿವೆ. ಹೀಗಿದ್ದರೂ ಬಿಜೆಪಿ ಶಾಸಕರ ಈ ರೀತಿಯ ವಾದ ಅರ್ಥವಾಗುತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ