ಸಂಗ್ರಹ ಚಿತ್ರ 
ದೇಶ

70 ವರ್ಷದ ವ್ಯಕ್ತಿಯನ್ನು ಬಾನೆಟ್ ಮೇಲೆ 8 ಕಿ.ಮೀ ಎಳೆದೊಯ್ದು ಕೆಳಗೆ ಇಳಿಸಿ ಕಾರು ಹತ್ತಿಸಿ ಕೊಂದ ದುರುಳ!

ದೆಹಲಿಯ ಕಂಝಾವಾಲಾದಂತಹ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ವೇಗವಾಗಿ ಬಂದ ಕಾರು 70 ವರ್ಷದ ವೃದ್ದರೊಬ್ಬರಿಗೆ ಡಿಕ್ಕಿ ಹೊಡೆದಿದೆ. 

ದೆಹಲಿಯ ಕಂಝಾವಾಲಾದಂತಹ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ವೇಗವಾಗಿ ಬಂದ ಕಾರು 70 ವರ್ಷದ ವೃದ್ದರೊಬ್ಬರಿಗೆ ಡಿಕ್ಕಿ ಹೊಡೆದಿದೆ. 

ಇದಾದ ಬಳಿಕ ಬಾನೆಟ್ ಮೇಲೆ ಸಿಲುಕಿದ್ದ ವೃದ್ಧನನ್ನು ಕಾರು ಸವಾರ ಸುಮಾರು 8 ಕಿ.ಮೀ.ವರೆಗೆ ಎಳೆದೊಯ್ದಿದ್ದು ನಂತರ ಕೆಳಗೆ ತಬ್ಬಿ ಆತನ ಮೇಲೆ ಕಾರು ಹತ್ತಿಸಿ ಕೊಂದಿರುವ ದಾರುಣ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ಚಾಲಕ ಕೂಡ ಸ್ಥಳದಿಂದ ಪರಾರಿಯಾಗಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆರೋಪಿ ಚಾಲಕ 70 ವರ್ಷದ ವ್ಯಕ್ತಿಯನ್ನು 8 ಕಿ.ಮೀ ಎಳೆದೊಯ್ದಿದ್ದು ನಂತರ ಬ್ರೇಕ್ ಹಾಕಿ ವ್ಯಕ್ತಿಯನ್ನು ಕೆಳಗೆ ಬೀಳಿಸಿದ್ದಾನೆ. ಬಳಿಕ ಕಾರನ್ನು ಆತನ ಮೇಲೆ ಹತ್ತಿಸಿ ಕೊಂದು ಪಿಪ್ರಕೋತಿ ಬಳಿ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಳೆದ ಶುಕ್ರವಾರ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಸಂಜೆ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೋತಿಹಾರಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ವೃದ್ಧನನ್ನು ಬಂಗಾರ ಗ್ರಾಮದ ನಿವಾಸಿ 70 ವರ್ಷದ ಶಂಕರ ಚೌಧರಿ ಎಂದು ಗುರುತಿಸಲಾಗಿದೆ. ಅಪಘಾತದ ಸಮಯದಲ್ಲಿ, ವೃದ್ಧರು ತಮ್ಮ ಸೈಕಲ್‌ಗಳಲ್ಲಿ NH-28 ರ ಕೊತ್ವಾ ಬಳಿಯ ಬಂಗಾರ ರಸ್ತೆಯನ್ನು ದಾಟುತ್ತಿದ್ದರು. ಮುದುಕ ಕಾರನ್ನು ನಿಲ್ಲಿಸುವಂತೆ ಮನವಿ ಮಾಡಿದರೂ ಚಾಲಕ ಕಾರನ್ನು ಚಲಾಯಿಸುತ್ತಲೇ ಇದ್ದ ಎಂದು ಕೆಲವು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮಾಲೀಕರ ಹೆಸರನ್ನು ಜಿಲ್ಲಾ ಸಾರಿಗೆ ಕಚೇರಿಯಲ್ಲಿ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಪಿಪ್ರಕೋತಿ ಪೊಲೀಸ್ ಠಾಣೆ ಎಸ್‌ಎಚ್‌ಒ ಅನುಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕಾರು ಗೋಪಾಲಗಂಜ್ ಕಡೆಯಿಂದ ಬರುತ್ತಿತ್ತು. ಸುಮಾರು ಒಂದು ಗಂಟೆ ಕಾಲ ಬಾನೆಟ್ ಮೇಲೆ ಮುದುಕನನ್ನು ಎಳೆದೊಯ್ದರು. ಸ್ಥಳೀಯರು ಸಹ ತಮ್ಮ ಬೈಕ್‌ಗಳಲ್ಲಿ ವಾಹನವನ್ನು ಹಿಂಬಾಲಿಸಿ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಕಾರು ಮೋತಿಹಾರಿ ಮೂಲದ ವೈದ್ಯರಿಗೆ ಸೇರಿದ್ದು. ಕೊತ್ವಾ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೋತಿಹಾರಿ ಎಸ್‌ಡಿಪಿಒ ಆರೂರ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. ಚಾಲಕನನ್ನು ಗುರುತಿಸಲು ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ. ಘಟನೆ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT