ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಸೇನಾ ತರಬೇತಿ ಕೇಂದ್ರದಲ್ಲಿ ಕರ್ನಲ್ ಆತ್ಮಹತ್ಯೆಗೆ ಶರಣು

ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಬಲ್‌ಪುರ: ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

1-ತಾಂತ್ರಿಕ ತರಬೇತಿ ರೆಜಿಮೆಂಟ್‌(ಟಿಟಿಆರ್)ನಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ನೇಮಕಗೊಂಡಿದ್ದ ಕರ್ನಲ್ ನಿಶಿತ್ ಖನ್ನಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ 10.30 ರ ಸುಮಾರಿಗೆ ಒನ್ ಸಿಗ್ನಲ್ ತರಬೇತಿ ಕೇಂದ್ರದ ಅಧಿಕಾರಿಗಳ ಮೆಸ್‌ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ(CSP) ಪ್ರಿಯಾಂಕಾ ಶುಕ್ಲಾ ಅವರು ಹೇಳಿದ್ದಾರೆ.

ಮೃತ ಸೇನಾ ಅಧಿಕಾರಿಯು "ಕ್ಷಮಿಸಿ" ಎಂದು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ.

ಪ್ರಾಥಮಿಕ ತನಿಖೆಯಲ್ಲಿ ಕರ್ನಲ್ ಖನ್ನಾ ಅವರ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದುಬಂದಿರುವುದಾಗಿ ಪ್ರಿಯಾಂಕಾ ಶುಕ್ಲಾ ತಿಳಿಸಿದ್ದಾರೆ.

ಮೃತ ಸೇನಾ ಅಧಿಕಾರಿಯು ಅಕ್ಟೋಬರ್ 25, 2022 ರಿಂದ ಅವರ ಪತ್ನಿ, ಮಗ ಮತ್ತು ಮಗಳನ್ನು ಒಳಗೊಂಡ ಕುಟುಂಬದಿಂದ ದೂರವಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT