ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಸೇನಾ ತರಬೇತಿ ಕೇಂದ್ರದಲ್ಲಿ ಕರ್ನಲ್ ಆತ್ಮಹತ್ಯೆಗೆ ಶರಣು

ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಬಲ್‌ಪುರ: ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

1-ತಾಂತ್ರಿಕ ತರಬೇತಿ ರೆಜಿಮೆಂಟ್‌(ಟಿಟಿಆರ್)ನಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ನೇಮಕಗೊಂಡಿದ್ದ ಕರ್ನಲ್ ನಿಶಿತ್ ಖನ್ನಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ 10.30 ರ ಸುಮಾರಿಗೆ ಒನ್ ಸಿಗ್ನಲ್ ತರಬೇತಿ ಕೇಂದ್ರದ ಅಧಿಕಾರಿಗಳ ಮೆಸ್‌ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ(CSP) ಪ್ರಿಯಾಂಕಾ ಶುಕ್ಲಾ ಅವರು ಹೇಳಿದ್ದಾರೆ.

ಮೃತ ಸೇನಾ ಅಧಿಕಾರಿಯು "ಕ್ಷಮಿಸಿ" ಎಂದು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ.

ಪ್ರಾಥಮಿಕ ತನಿಖೆಯಲ್ಲಿ ಕರ್ನಲ್ ಖನ್ನಾ ಅವರ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದುಬಂದಿರುವುದಾಗಿ ಪ್ರಿಯಾಂಕಾ ಶುಕ್ಲಾ ತಿಳಿಸಿದ್ದಾರೆ.

ಮೃತ ಸೇನಾ ಅಧಿಕಾರಿಯು ಅಕ್ಟೋಬರ್ 25, 2022 ರಿಂದ ಅವರ ಪತ್ನಿ, ಮಗ ಮತ್ತು ಮಗಳನ್ನು ಒಳಗೊಂಡ ಕುಟುಂಬದಿಂದ ದೂರವಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಸಂಸದ ಇಮ್ರಾನ್ ಮಸೂದ್