ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಸೇನಾ ತರಬೇತಿ ಕೇಂದ್ರದಲ್ಲಿ ಕರ್ನಲ್ ಆತ್ಮಹತ್ಯೆಗೆ ಶರಣು

ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಬಲ್‌ಪುರ: ಮಧ್ಯ ಪ್ರದೇಶದ ಜಬಲ್‌ಪುರ ಸೇನಾ ತರಬೇತಿ ಕೇಂದ್ರದಲ್ಲಿ 43 ವರ್ಷದ ಭಾರತೀಯ ಸೇನೆಯ ಕರ್ನಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

1-ತಾಂತ್ರಿಕ ತರಬೇತಿ ರೆಜಿಮೆಂಟ್‌(ಟಿಟಿಆರ್)ನಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ನೇಮಕಗೊಂಡಿದ್ದ ಕರ್ನಲ್ ನಿಶಿತ್ ಖನ್ನಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ 10.30 ರ ಸುಮಾರಿಗೆ ಒನ್ ಸಿಗ್ನಲ್ ತರಬೇತಿ ಕೇಂದ್ರದ ಅಧಿಕಾರಿಗಳ ಮೆಸ್‌ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ(CSP) ಪ್ರಿಯಾಂಕಾ ಶುಕ್ಲಾ ಅವರು ಹೇಳಿದ್ದಾರೆ.

ಮೃತ ಸೇನಾ ಅಧಿಕಾರಿಯು "ಕ್ಷಮಿಸಿ" ಎಂದು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ.

ಪ್ರಾಥಮಿಕ ತನಿಖೆಯಲ್ಲಿ ಕರ್ನಲ್ ಖನ್ನಾ ಅವರ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದುಬಂದಿರುವುದಾಗಿ ಪ್ರಿಯಾಂಕಾ ಶುಕ್ಲಾ ತಿಳಿಸಿದ್ದಾರೆ.

ಮೃತ ಸೇನಾ ಅಧಿಕಾರಿಯು ಅಕ್ಟೋಬರ್ 25, 2022 ರಿಂದ ಅವರ ಪತ್ನಿ, ಮಗ ಮತ್ತು ಮಗಳನ್ನು ಒಳಗೊಂಡ ಕುಟುಂಬದಿಂದ ದೂರವಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ- ರಿಜಿಜು

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

SCROLL FOR NEXT