ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಟೆಕ್ ಸಂಸ್ಥೆಗಳಲ್ಲಿನ ಸಾಮೂಹಿಕ ಉದ್ಯೋಗ ಕಡಿತದ ಬಗ್ಗೆ ಗಮನಹರಿಸಿ, ಸರಿಯಾದ ಕ್ರಮ ತೆಗೆದುಕೊಳ್ಳಿ: ಅರವಿಂದ್ ಕೇಜ್ರಿವಾಲ್

ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.

ನವದೆಹಲಿ: ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವಾರು ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕಿದ್ದೇ ಅಮೆರಿಕ ಮತ್ತು ಇತರ ದೇಶಗಳಲ್ಲಿಯೂ ಉದ್ಯೋಗ ಕಡಿತಕ್ಕೆ ಕಾರಣವಾಯಿತು. 

ಐಟಿ ವಲಯದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ವಂಚಿತರಾಗುತ್ತಿದ್ದಾರೆ. ಕೇಂದ್ರ ಸರ್ಕಾರವು ಭಾರತದ ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಹಿಂದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಕಂಪನಿಯು 10,000 ಅಥವಾ ಅದರ ಒಟ್ಟು ಉದ್ಯೋಗಿಗಳ ಶೇ 5ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಲಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆ ಟೆಕ್ ದೈತ್ಯ 'ಪರಿಣಾಮಕಾರಿ ಕಂಪನಿ' ಆಗಿ ಉಳಿಯಲು ಇದು ಕಠಿಣ ಆಯ್ಕೆಯಾಗಿದೆ ಎಂದು ಹೇಳಿದರು. 

ಫೇಸ್‌ಬುಕ್ ಮತ್ತು ಅಮೆಜಾನ್ ನಂತರ ಮೈಕ್ರೋಸಾಫ್ಟ್ ಇತ್ತೀಚಿನ ಸಂಸ್ಥೆಯಾಗಿದ್ದು, 2023ರಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ.

ಸದ್ಯದ ಸಾಂಕ್ರಾಮಿಕದ ಸಮಯವನ್ನು ಮಹತ್ವದ ಬದಲಾವಣೆಯ ಅವಧಿ ಎಂದು ವಿವರಿಸುತ್ತಾ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಡಿಜಿಟಲ್ ವೆಚ್ಚವನ್ನು ಹೆಚ್ಚಿಸಿದ ಗ್ರಾಹಕರು ಈಗ ಕಡಿಮೆ ವೆಚ್ಚದಲ್ಲಿ ಹೆಚ್ಚಿನದನ್ನು ಮಾಡಲು ನೋಡುತ್ತಿದ್ದಾರೆ ಎಂದು ಭಾರತೀಯ ಮೂಲದ ನಾದೆಲ್ಲಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು, ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ

ಬೆಂಗಳೂರಿನಲ್ಲಿಂದು IPL 2026 ಉದ್ಘಾಟನೆ: ಕಾಲ್ತುಳಿತ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್, ಎಲ್ಲೆಡೆ ಬಿಗಿ ಭದ್ರತೆ

ತಮಿಳುನಾಡು ವಿಧಾನಸಭೆ ಚುನಾವಣೆ- 2026: ಸೀಟು ಹಂಚಿಕೆ ಬಗ್ಗೆ ಅಸಮಾಧಾನ; ಸ್ಪರ್ಧಿಸಲು ಅಣ್ಣಾಮಲೈ ಹಿಂದೇಟು; ಬಿಎಲ್ ಸಂತೋಷ್ ಸಭೆಗೆ ಗೈರು!

ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅರೆಸ್ಟ್‌

ನಮ್ಮ ರಾಜಕೀಯ ಸಂಸ್ಕೃತಿ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ: ದೇಶಕ್ಕೆ ಸೇವೆ ಮಾಡಿದವರು ತಲೆಬಾಗಬೇಕೆ? ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಫೋಟೋ!

SCROLL FOR NEXT