ಪ್ರಕಾಶ್ ಅಂಬೇಡ್ಕರ್ - ಉದ್ಧವ್ ಠಾಕ್ರೆ 
ದೇಶ

ಪ್ರಕಾಶ್ ಅಂಬೇಡ್ಕರರ ವಂಚಿತ್ ಬಹುಜನ ಅಘಾಡಿ ಜತೆ ಮೈತ್ರಿ ಘೋಷಿಸಿದ ಉದ್ಧವ್ ಶಿವಸೇನೆ

ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಸೋಮವಾರ ಮೈತ್ರಿ ಘೋಷಿಸಿವೆ.

ಮುಂಬೈ: ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಸೋಮವಾರ ಮೈತ್ರಿ ಘೋಷಿಸಿವೆ.

ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, ತಮ್ಮ ತಾತ ಕೇಶವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಮಕಾಲೀನರು. ಈ ಇಬ್ಬರು ಪರಸ್ಪರ ಮೆಚ್ಚಿಕೊಂಡಿದ್ದರು ಮತ್ತು ಸಾಮಾಜಿಕ ಅನಿಷ್ಟಗಳು ಹಾಗೂ ಕೆಟ್ಟ ಆಚರಣೆಗಳನ್ನು ತೊಡೆದುಹಾಕಲು ಶ್ರಮಿಸಿದರು ಎಂದರು.

"ಈಗ ರಾಜಕೀಯದಲ್ಲಿ ಕೆಲವು ಕೆಟ್ಟ ಆಚರಣೆಗಳಿದ್ದು, ಅವುಗಳನ್ನು ನಿರ್ಮೂಲನೆ ಮಾಡಲು, ಆ ಇಬ್ಬರು ನಾಯಕರ ವಾರಸುದಾರರು ಮತ್ತು ಅವರ ಸುತ್ತಲಿನ ಜನ ದೇಶದ ಹಿತಾಸಕ್ತಿ ಕಾಪಾಡಲು ಒಗ್ಗೂಡಿದ್ದಾರೆ. ಪ್ರಜಾಪ್ರಭುತ್ವ ಜೀವಂತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಗ್ಗೂಡುತ್ತಿದ್ದೇವೆ" ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷದ ಹೆಸರನ್ನು ನೇರವಾಗಿ ಹೇಳದೆ, ದೇಶ ನಿರಂಕುಶಾಧಿಕಾರದತ್ತ ಸಾಗುತ್ತಿದೆ ಎಂದು ಠಾಕ್ರೆ ವಾಗ್ದಾಳಿ ನಡೆಸಿದರು.

ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ವಂಚಿತ್ ಬಹುಜನ ಅಘಾಡಿ ಮತ್ತು ಉದ್ಧವ್ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, ಈ ಕುರಿತು ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ಅವರು, ವಿಬಿಎ ಮತ್ತು ಶಿವಸೇನೆ (ಯುಬಿಟಿ) ಮೈತ್ರಿಯಿಂದ ರಾಜಕೀಯ ಬದಲಾವಣೆಯ ಪರ್ವ ಆರಂಭವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT