ರಕ್ಷಣಾ ಸಿಬ್ಬಂದಿಯ ಚಿತ್ರ 
ದೇಶ

ಪುಣೆ: ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆ, ಸಾಮೂಹಿಕ ಆತ್ಮಹತ್ಯೆ ಶಂಕೆ

ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಸದಸ್ಯರ ಮೃತದೇಹಗಳನ್ನು ಹೊರತೆಗೆಯಲಾಗಿದೆ.ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ.

ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ.

ಎಲ್ಲಾ ಏಳು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಟುಂಬ ಸದಸ್ಯರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದರೂ, ಎಲ್ಲಾ ಆಯಾಮಗಳಲ್ಲಿ ಪರಿಶೀಲಿಸಲಾಗುತ್ತಿದೆ. ವಿವರವಾದ ತನಿಖೆ ನಡೆಸುವವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಪುಣೆ ಗ್ರಾಮಾಂತರ ಪೊಲೀಸ್  ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಜನವರಿ 18 ರಂದು ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ನಂತರ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ಜೊತೆಗೆ ಜಂಟಿ ಕಾರ್ಯಾಚರಣೆ ಆರಂಭಿಸಲಾಯಿತು. ಸೋಮವಾರ ನಾಲ್ಕು ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ  ಒಬ್ಬರ ಜೇಬಿನಿಂದ ಮೊಬೈಲ್ ಫೋನ್ ಪತ್ತೆಯಾಗಿದೆ. ಇದರಿಂದ ಅವರು ಗುರುತು ಪತ್ತೆ ಮಾಡಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮೂವರ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಎಲ್ಲಾ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT