ಸಾಂದರ್ಭಿಕ ಚಿತ್ರ 
ದೇಶ

ಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್

ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

ಅಹಮದಾಬಾದ್: ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಪಘಾತ ಸಂಭವಿಸಿದ ಸ್ಥಳದಿಂದ ಸುಮಾರು 12 ಕಿ.ಮೀ ದೂರದವರೆಗೂ ಮೃತದೇಹವನ್ನು ಕಾರಿನಲ್ಲಿ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜನವರಿ 18 ರಂದು ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಅಪಘಾತಕ್ಕೆ ಕಾರಣವಾದ ಕಾರಿನ ವಿಡಿಯೋ ವೈರಲ್ ಆದ ಬಳಿಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗಿದೆ. 
ಸಮರಿತನ್ ಎಂಬುವರ ಕಾರಿನ ವಿಡಿಯೋವನ್ನು ಸೂರತ್ ಗ್ರಾಮಾಂತರ ಪೊಲೀಸರೊಂದಿಗೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಮೃತನ ಪತ್ನಿ ಅಶ್ವಿನಿ ಪಾಟೀಲ್  ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ರಾತ್ರಿ 10 ಗಂಟೆ ಸುಮಾರಿನಲ್ಲಿ ನನ್ನ ಪತಿ ಹಾಗೂ ನಾನು ಸೂರತ್ ಗೆ ಬಂದಾಗ ಇದ್ದಕ್ಕಿದ್ದಂತೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆಯಿತು. ನಾನು ವಾಹನದಿಂದ ಬಿದ್ದೆ; ಅದೃಷ್ಟವಶಾತ್, ಸುತ್ತಮುತ್ತಲಿನ ಜನರು  ಸಹಾಯ ಮಾಡಲು ಬಂದರು. ಕತ್ತಲೆಯಲ್ಲಿ ರಸ್ತೆಯಲ್ಲಿ ನನ್ನ ಗಂಡನಿಗಾಗಿ ಹುಡುಕಿದರು. ಆದರೆ, ಅವರು ಪತ್ತೆಯಾಗಲೇ ಇಲ್ಲ ಎಂದು ತಿಳಿಸಿದ್ದಾರೆ. 

ಶಂಕಿತ ಕಾರಿನ ವಿಡಿಯೋವನ್ನು ನೆಟ್ಟಿಗರು ವಾಟ್ಸಾಪ್ ನಲ್ಲಿ ಹಂಚಿಕೊಂಡ ನಂತರ ಆರೋಪಿಯನ್ನು ಪತ್ತೆ ಹಚ್ಚಲಾಗಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಎಸ್ ಪಿ ಹಿತೇಶ್ ಜಯ್ಸಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT