ರಾಷ್ಟ್ರಪತಿ ಮುರ್ಮು 
ದೇಶ

ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು

74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.

ನವದೆಹಲಿ: 74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.

ರಾಷ್ಟ್ರಪತಿಗಳಾಗಿ ಇಂದು ಮೊದಲ ಬಾರಿಗೆ ದೇಶ ಉದ್ದೇಶಿ ಭಾಷಣ ದ್ರೌಪದಿ ಮುರ್ಮು ಅವರು, "ನಾವು ಗಣರಾಜ್ಯೋತ್ಸವವನ್ನು ಆಚರಿಸಿದಾಗ, ನಾವು ಸಾಧಿಸಿದ್ದನ್ನು ಒಟ್ಟಾಗಿ, ರಾಷ್ಟ್ರವಾಗಿ ಸಂಭ್ರಮಿಸುತ್ತೇವೆ" ಎಂದು ಹೇಳಿದರು.

"ಸಂವಿಧಾನದ ಕರಡು ಸಮಿತಿಯ ನೇತೃತ್ವ ವಹಿಸಿ, ಅದಕ್ಕೆ ಅಂತಿಮ ರೂಪ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ಸದಾ ಕೃತಜ್ಞತೆ ಸಲ್ಲಿಸುತ್ತದೆ" ಎಂದು ರಾಷ್ಟ್ರಪತಿಗಳು ತಿಳಿಸಿದರು.

"ಆರಂಭಿಕ ಕರಡು ಸಿದ್ಧಪಡಿಸಿದ ನ್ಯಾಯಶಾಸ್ತ್ರಜ್ಞ ಬಿಎನ್ ರಾವ್ ಮತ್ತು ಸಂವಿಧಾನ ರಚನೆಯಲ್ಲಿ ಸಹಾಯ ಮಾಡಿದ ಇತರ ತಜ್ಞರು, ಅಧಿಕಾರಿಗಳ ಪಾತ್ರವನ್ನು ನಾವು ನೆನಪಿಸಿಕೊಳ್ಳಬೇಕು. ಆ ಅಸೆಂಬ್ಲಿಯ ಸದಸ್ಯರು ಭಾರತದ ಎಲ್ಲಾ ಪ್ರದೇಶಗಳು ಮತ್ತು ಸಮುದಾಯಗಳನ್ನು ಪ್ರತಿನಿಧಿಸಿದ್ದರು ಮತ್ತು ಅದರಲ್ಲಿ 15 ಮಹಿಳೆಯರೂ ಇದ್ದರು ಎಂಬ ಅಂಶದ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಎಂದಿದ್ದಾರೆ.

ಕೋವಿಡ್ ಸಾಂಕ್ರಾಮಿಕದಿಂದ ಹಲವು ವಲಯಗಳು ನಷ್ಟ ಅನುಭವಿಸಿವೆ. ಆದರೆ ಸರ್ಕಾರದ ಸಮಯೋಚಿತ ಮತ್ತು ಪೂರ್ವಭಾವಿ ಕ್ರಮಗಳು ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT