ಜಾಮಿಯಾ ವಿವಿ 
ದೇಶ

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜಾಮಿಯಾ ವಿವಿಯಲ್ಲಿ ಭದ್ರತೆ ಹೆಚ್ಚಳ, 4 ವಿದ್ಯಾರ್ಥಿಗಳ ಬಂಧನ

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಘೋಷಿಸಿದ...

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಘೋಷಿಸಿದ ನಂತರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಯ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕ್ಯಾಂಪಸ್ ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ ಮತ್ತು ವಿಶ್ವವಿದ್ಯಾಲಯದ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲು ಪಟ್ಟಭದ್ರ ಹಿತಾಸಕ್ತಿಗಳನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಜಾಮಿಯಾ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಹೇಳಿದೆ.

ವಿದ್ಯಾರ್ಥಿ ಸಂಘಟನೆಯಿಂದ ಸಂಜೆ 6 ಗಂಟೆಗೆ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರದರ್ಶನಕ್ಕೂ ಕೆಲವೇ ಗಂಟೆಗಳ ಮುನ್ನ ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಮಧ್ಯೆ ವಿದ್ಯಾರ್ಥಿಗಳ ಬಂಧನದ ವಿರುದ್ಧ ಎಸ್‌ಎಫ್‌ಐ ಸಂಜೆ ಪ್ರತಿಭಟನೆಗೆ ಕರೆ ನೀಡಿದೆ.

ಎಸ್‌ಎಫ್‌ಐನ ಜಾಮಿಯಾ ಘಟಕವು ಎಂಸಿಆರ್‌ಸಿ ಲಾನ್ ಗೇಟ್ ಸಂಖ್ಯೆ 8 ರಲ್ಲಿ ಸಂಜೆ 6 ಗಂಟೆಗೆ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು ಎಂದು ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

ವಿವಿಯ ಗೇಟ್ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಸಹ ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ