ಗೋವಾ ಸಿಎಂ ಪ್ರಮೋದ್‌ ಸಾವಂತ್‌ 
ದೇಶ

ಮಹದಾಯಿ ವಿವಾದ: ಕಾನೂನು, ರಾಜಕೀಯ ಯಾವುದೇ ಮಾರ್ಗದಲ್ಲಿ ಹೋರಾಡಲು ನಾವು ಸಿದ್ಧ; ಗೋವಾ ಸಿಎಂ

ಯಾರು ಏನೇ ಹೇಳಲಿ, ಮಹದಾಯಿಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮಂಗಳವಾರ ಹೇಳಿದ್ದಾರೆ.

ಪಣಜಿ: ಯಾರು ಏನೇ ಹೇಳಲಿ, ಮಹದಾಯಿಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಲಿ, ನಮ್ಮ ನಿರ್ಧಾರದಲ್ಲಿ ನಾವು ದೃಢವಾಗಿದ್ದೇವೆ. ಮಹದಾಯಿಗಾಗಿ ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ತಾಂತ್ರಿಕವಾಗಿ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ನಾವು ಕೈಗೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಹದಾಯಿ ಯೋಜನೆ ಕುರಿತು ಹೇಳಿಕೆ ನೀಡಿದ್ದ ಸಿಎಂ ಬೊಮ್ಮಾಯಿಯವರು, ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ಸರಕಾರ ತೆಗೆದುಕೊಂಡಿರುವ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ಈಗಾಗಲೇ ಯೋಜನೆಯ ಸಮಗ್ರ ಪರಿಷ್ಕೃತ ವರದಿ ಗೆ ಅನುಮೋದನೆ ಸಿಕ್ಕಿದೆ. ಅರಣ್ಯ ಇಲಾಖೆಯ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ಹೇಳಿದ್ದರು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮಹದಾಯಿ ನ್ಯಾಯಾಧೀಕರಣ ರಚನೆಯಾಗಿದೆ. 10 ವರ್ಷ ನ್ಯಾಯಾಧೀಕರಣದ ವಿಚಾರಣೆ ನಡೆದು ಆದೇಶ ಬಂದಿದೆ. ನ್ಯಾಯಾಧೀಕರಣದ ಆದೇಶ ಎಂದರೆ ಅದು ಸರ್ವೋಚ್ಚ ನ್ಯಾಯಾಲಯದ ತೀರ್ಪು ಇದ್ದಂತೆ. ಈ ಆದೇಶದ ಆಧಾರದ ಮೇಲೆ ನಾವು ಡಿಪಿಅರ್ ಮಾಡಿದ್ದೇವೆ. ಕಾನೂನು ಬದ್ಧವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT