ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ 
ದೇಶ

ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಭತ್ಯೆ ಘೋಷಿಸಿದ ಛತ್ತೀಸ್ ಗಢ ಸಿಎಂ ಬಘೇಲ್

ಮುಂದಿನ ವರ್ಷ ಛತ್ತೀಸ್ ಗಢ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಸಿಎಂ ಭೂಪೇಶ್ ಬಘೇಲ್ ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದಾರೆ. 

ರಾಯ್ ಪುರ: ಮುಂದಿನ ವರ್ಷ ಛತ್ತೀಸ್ ಗಢ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಸಿಎಂ ಭೂಪೇಶ್ ಬಘೇಲ್ ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದಾರೆ. 

2018 ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು. 2018 ರಲ್ಲಿ 15 ವರ್ಷಗಳ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು.

 ಗಣರಾಜ್ಯೋತ್ಸವದ ಅಂಗವಾಗಿ ಮಾತನಾಡಿದ ಬಘೇಲ್, ಗ್ರಾಮೀಣ ಉದ್ಯಮ ನೀತಿಯ ರಚನೆಯನ್ನು ಘೋಷಿಸಿದ್ದಾರೆ. 

ಕೈಗಾರಿಕಾ ಇಲಾಖೆಯಿಂದ ಅಭಿವೃದ್ಧಿಯಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಗೆ ಆಸ್ತಿ ತೆರಿಗೆಯಿಂದ ವಿನಾಯ್ತಿ ನೀಡಲಾಗುವುದು ಎಂದು ಸಿಎಂ ಬಘೇಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT