ಪ್ರಧಾನಿ ಮೋದಿ. 
ದೇಶ

74ನೇ ಗಣರಾಜ್ಯೋತ್ಸವ: ರಾಜಸ್ಥಾನಿ ಪೇಟ ತೊಟ್ಟ ಪ್ರಧಾನಿ ಮೋದಿ, ಇದರ ವಿಶೇಷತೆ ಏನು?

74ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ಕರ್ತವ್ಯಪಥಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ರಾಜಸ್ಥಾನಿ ಪೇಟ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು.

ನವದೆಹಲಿ: 74ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ಕರ್ತವ್ಯಪಥಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ರಾಜಸ್ಥಾನಿ ಪೇಟ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು.

ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಗುರುವಾರದ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು. ಮೋದಿಯವರು ಭಾರತದ ವೈವಿಧ್ಯತೆಯನ್ನು ಸಂಕೇತಿಸುವ ಬಹುವರ್ಣದ ರಾಜಸ್ಥಾನಿ ಪೇಟವನ್ನು ಧರಿಸಿದ್ದರು. ಜೊತೆಗೆ, ಕೆನೆ ಬಣ್ಣದ ಕುರ್ತಾ ಮತ್ತು ಬಿಳಿ ಶಾಲು ಧರಿಸಿದ್ದರು. ಪರೇಡ್'ಗೂ ಮುನ್ನ ಮೋದಿಯವರು ಯುದ್ಧ ಸ್ಮಾರಕವನ್ನು ತಲುಪಿದಾಗ ಅವರ ಈ ವರ್ಷದ ಉಡುಗೆಯ ಮೊದಲ ನೋಟವು ಎಲ್ಲರ ಗಮನ ಸೆಳೆಯಿತು.

ಬಿಳಿ ಕುರ್ತಾ ಮತ್ತು ಕಪ್ಪು ಕೋಟ್, ಪ್ಯಾಂಟ್ ಧರಿಸಿರುವ ಪ್ರಧಾನಿ ಮೋದಿ ಬಿಳಿ ಸ್ಟೋಲ್ ಧರಿಸಿದ್ದರು. ಕಪ್ಪು ಮತ್ತು ಬಿಳಿ ಉಡುಗೆ ಜೊತೆ ಬಹುವರ್ಣದ ಪೇಟವು ಅವರ ಲುಕ್​ ಅನ್ನು ಹೆಚ್ಚಿಸಿತ್ತು.

ಕಳೆದ ವರ್ಷ, ಉತ್ತರಾಖಂಡ್‌ನಿಂದ ಬ್ರಹ್ಮಕಮಲ್ ಕ್ಯಾಪ್ ಧರಿಸಿ ಮಣಿಪುರದಿಂದ ಲಿರಂ ಫೈ ತೊಟ್ಟಿದ್ದರು, ಪ್ರಧಾನಿ ಮೋದಿ ಅವರ ಉಡುಗೆಯು ಉತ್ತರಾಖಂಡ ಮತ್ತು ಮಣಿಪುರದ ವಿಶಿಷ್ಟ ಸ್ಪರ್ಶವನ್ನು ಹೊಂದಿತ್ತು.

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಎರಡು ಸಂದರ್ಭಗಳಲ್ಲಿ ಪಿಎಂ ಮೋದಿಯವರ ಉಡುಗೆ ಆಯ್ಕೆಯ ಹೆಚ್ಚಿನ ಕುತೂಹಲ ಮೂಡುತ್ತದೆ. ಪ್ರಧಾನಿ ಮೋದಿ ಅವರು ನಿರ್ದಿಷ್ಟ ಬುಡಕಟ್ಟು ಅಥವಾ ಪ್ರದೇಶದ ಸಾಂಪ್ರದಾಯಿಕ ಬಟ್ಟೆಗಳನ್ನು ಇತರ ಸಂದರ್ಭಗಳಲ್ಲಿಯೂ ಧರಿಸುತ್ತಾರೆ.

2022 ರ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿಯವರ ಪೇಟದಲ್ಲಿ ತ್ರಿವರ್ಣ ಧ್ವಜದ ಒಂದು ನೋಟ ಕಂಡುಬಂದಿತ್ತು. ಕೇಸರಿ, ಬಿಳಿ ಮತ್ತು ಹಸಿರು ಬಣ್ಣದ ಈ ಪೇಟ ಆಕರ್ಷಣೆಯ ಕೇಂದ್ರವಾಗಿತ್ತು. ಈ ಬಾರಿ ಅವರು ವಿಶೇಷ ಬಹುವರ್ಣದ ರಾಜಸ್ಥಾನಿ ಪೇಟದೊಂದಿಗೆ ಜನರ ಮನ ಗೆದ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT