ನಂದಮೂರಿ ತಾರಕರತ್ನ 
ದೇಶ

ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್

ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ.

ಕುಪ್ಪಂ: ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಪಾದಯಾತ್ರೆಯಲ್ಲಿ ನಂದಮೂರಿ ತಾರಕ ರತ್ನ ಅವರು ಭಾಗವಹಿಸಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ.  ತಾರಕ ರತ್ನ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸದ್ಯ ಕುಪ್ಪಂನ ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT