ಒಡಿಶಾ ಸಚಿವರಿಗೆ ಗುಂಡೇಟು 
ದೇಶ

ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. 

ಭುವನೇಶ್ವರ: ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. 

ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಈ ಘಟನೆ ಸಂಭವಿಸಿದೆ. ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. 

ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿರುವ ನಬ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೂರ್ವಯೋಜಿತ ಕೃತ್ಯ
ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ. ಆದರೆ, ಯಾವ ಕಾರಣಕ್ಕಾಗಿ ಇವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂಬುದು ತಿಳಿದುಬಂದಿಲ್ಲ. ನಬ್ ದಾಸ್ ಮೇಲೆ ಆರೋಪಿಯು ನಾಲ್ಕೈದು ಸುತ್ತು ಗುಂಡಿನ ದಾಳಿ ಮಾಡಿದ್ದಾನೆ. ಎರಡು ಗುಂಡಗಳು ಎದೆಗೆ ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಆರೋಪಿಯಾಗಿರುವ ಎಎಸ್​ಐ ಗೋಪಾಲ್ ಚಂದ್ರ ದಾಸ್​ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಕುಟುಂಬಕ್ಕೆ ಸೊಸೆ ಆಗಮನದ ಖುಷಿ: ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸ ವರ್ಷ ಕಳೆಯಲಿರುವ ಗಾಂಧಿ-ವಾದ್ರಾ ಕುಟುಂಬ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ, ಹುಳಿ ಹಿಂಡಬೇಡಿ: BJPಗೆ ಡಿಕೆ.ಶಿವಕುಮಾರ್

SCROLL FOR NEXT