ಒಡಿಶಾ ಸಚಿವರಿಗೆ ಗುಂಡೇಟು 
ದೇಶ

ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. 

ಭುವನೇಶ್ವರ: ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. 

ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಈ ಘಟನೆ ಸಂಭವಿಸಿದೆ. ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. 

ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿರುವ ನಬ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೂರ್ವಯೋಜಿತ ಕೃತ್ಯ
ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ. ಆದರೆ, ಯಾವ ಕಾರಣಕ್ಕಾಗಿ ಇವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂಬುದು ತಿಳಿದುಬಂದಿಲ್ಲ. ನಬ್ ದಾಸ್ ಮೇಲೆ ಆರೋಪಿಯು ನಾಲ್ಕೈದು ಸುತ್ತು ಗುಂಡಿನ ದಾಳಿ ಮಾಡಿದ್ದಾನೆ. ಎರಡು ಗುಂಡಗಳು ಎದೆಗೆ ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಆರೋಪಿಯಾಗಿರುವ ಎಎಸ್​ಐ ಗೋಪಾಲ್ ಚಂದ್ರ ದಾಸ್​ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT