ಗೌತಮ್ ಬುದ್ಧ ಶತಮಾನೋತ್ಸವ ಗಾರ್ಡನ್ 
ದೇಶ

ಈಗ ದೆಹಲಿ ವಿವಿಯ ಮೊಘಲ್ ಗಾರ್ಡನ್‌ಗೆ ಬುದ್ಧನ ಹೆಸರು

ಇತ್ತೀಚಿಗಷ್ಟೇ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿತ್ತು. ಈಗ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಮೊಘಲ್ ಗಾರ್ಡನ್ ಗೂ...

ನವದೆಹಲಿ: ಇತ್ತೀಚಿಗಷ್ಟೇ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿತ್ತು. ಈಗ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಮೊಘಲ್ ಗಾರ್ಡನ್ ಗೂ ಮರುನಾಮಕರಣ ಮಾಡಲಾಗಿದ್ದು, 'ಗೌತಮ್ ಬುದ್ಧ ಶತಮಾನೋತ್ಸವ ಗಾರ್ಡನ್' ಎಂದು ಹೆಸರಿಡಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಷ್ಟ್ರಪತಿ ಭವನವೂ ಕಳೆದ ಶನಿವಾರ ತನ್ನ ಪ್ರಸಿದ್ಧ ಮೊಘಲ್ ಗಾರ್ಡನ್ ಹೆಸರನ್ನು 'ಅಮೃತ್ ಉದ್ಯಾನ್' ಎಂದು ಬದಲಾಯಿಸಿತ್ತು.

ಹೆಸರು ಹೇಳಲು ಇಚ್ಛಿಸದ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು, ಮೊಘಲ್ ಗಾರ್ಡನ್‌ ಹೆಸರು ಬದಲಾವಣೆ ಕಾಕತಾಳೀಯ ಅಷ್ಟೇ. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಉದ್ಯಾನ ಸಮಿತಿಯೊಂದಿಗೆ ಸುದೀರ್ಘ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.

"ಉದ್ಯಾನದಲ್ಲಿ ಗೌತಮ ಬುದ್ಧನ ಪ್ರತಿಮೆ ಇರುವುದರಿಂದ ದೆಹಲಿ ವಿಶ್ವವಿದ್ಯಾಲಯದ ಸಕ್ಷಮ ಪ್ರಾಧಿಕಾರವು ಉದ್ಯಾನದ ಹೆಸರನ್ನು ಗೌತಮ್ ಬುದ್ಧ ಸೆಂಟಿನರಿ ಗಾರ್ಡನ್ ಎಂದು ಅನುಮೋದಿಸಿದೆ" ಎಂದು ರಿಜಿಸ್ಟ್ರಾರ್ ವಿಕಾಸ್ ಗುಪ್ತಾ ಜನವರಿ 27 ರಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಗೌತಮ ಬುದ್ಧನ ಪ್ರತಿಮೆಯು ಉದ್ಯಾನದಲ್ಲಿ ಕನಿಷ್ಠ 15 ವರ್ಷಗಳಿಂದ ಇದೆ.

ಈ ಉದ್ಯಾನವನ್ನು ಮೊಘಲರು ನಿರ್ಮಿಸಿಲ್ಲ ಅಥವಾ ಮೊಘಲ್ ಉದ್ಯಾನ ವಿನ್ಯಾಸವನ್ನು ಹೊಂದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT