ಅಹ್ಮದ್ ಮುರ್ತಾಜಾ ಅಬ್ಬಾಸಿ 
ದೇಶ

ಗೋರಖನಾಥ ದೇಗುಲದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾಗೆ ಗಲ್ಲುಶಿಕ್ಷೆ!

ಗೋರಖ್‌ನಾಥ ದೇಗುಲದಲ್ಲಿ ಪಿಎಸಿ ಯೋಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ಎಟಿಎಸ್ ನ್ಯಾಯಾಲಯದ ತೀರ್ಪು ನೀಡಿದ್ದು ಗಲ್ಲು ಶಿಕ್ಷೆ ವಿಧಿಸಿದೆ.

ಲಖನೌ: ಗೋರಖ್‌ನಾಥ ದೇಗುಲದಲ್ಲಿ ಪಿಎಸಿ ಯೋಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ಎಟಿಎಸ್ ನ್ಯಾಯಾಲಯದ ತೀರ್ಪು ನೀಡಿದ್ದು ಗಲ್ಲು ಶಿಕ್ಷೆ ವಿಧಿಸಿದೆ. 

ವಿಶೇಷ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಕಳೆದ ಶನಿವಾರ ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆಯ ಅವಧಿಯ ವಿಚಾರಣೆಗೆ ನ್ಯಾಯಾಲಯವು ಜನವರಿ 30 ರಂದು ದಿನಾಂಕವನ್ನು ನಿಗದಿಪಡಿಸಿತ್ತು. ಅದರಂತೆ ಇಂದು ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ.

ಈ ಪ್ರಕರಣ ಸಂಬಂಧ ವಿನಯ್ ಕುಮಾರ್ ಮಿಶ್ರಾ ಅವರು 2022ರ ಏಪ್ರಿಲ್ 4ರಂದು ಗೋರಖ್‌ನಾಥ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ದಾಖಲಾದ ಪ್ರಕರಣದ ಪ್ರಕಾರ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪದವೀಧರನಾದ ಅಬ್ಬಾಸಿ ಏಪ್ರಿಲ್ 3ರಂದು ಗೋರಖನಾಥ ದೇವಾಲಯದ ಸಂಕೀರ್ಣಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದನು. ಈ ವೇಳೆ ಚಾಕುವಿನಿಂದ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದನು.

ಈ ದಾಳಿಯಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದರು. ಅಬ್ಬಾಸಿಯನ್ನು ಇತರ ಭದ್ರತಾ ಸಿಬ್ಬಂದಿ ತಡೆದು ನಂತರ ಆತನನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ಉತ್ತರಪ್ರದೇಶ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ತನಿಖೆ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ!

SCROLL FOR NEXT