ಕೃಷಿ ಚಟುವಟಿಕೆ (ಸಂಗ್ರಹ ಚಿತ್ರ) 
ದೇಶ

ಗುಜರಾತ್ ನ 6 ಜಿಲ್ಲೆಗಳಲ್ಲಿ ಸಾವಯವ ಕೃಷಿಯನ್ನು ಕೇಳುವವರಿಲ್ಲ!

ಕೇಂದ್ರ ಸರ್ಕಾರ ಸಾವಯವ ಕೃಷಿಯನ್ನು ದೇಶಾದ್ಯಂತ ವಿಸ್ತರಿಸಲು ಶ್ರಮಿಸುತ್ತಿದೆ. ಆದರೆ ಗುಜರಾತ್ ನ 6 ಜಿಲ್ಲೆಗಳಲ್ಲಿ ಸಾವಯವ ಕೃಷಿಯನ್ನು ಕೇಳುವವರೇ ಇಲ್ಲದಂತಾಗಿದೆ.

ಅಹ್ಮದಾಬಾದ್: ಕೇಂದ್ರ ಸರ್ಕಾರ ಸಾವಯವ ಕೃಷಿಯನ್ನು ದೇಶಾದ್ಯಂತ ವಿಸ್ತರಿಸಲು ಶ್ರಮಿಸುತ್ತಿದೆ. ಆದರೆ ಗುಜರಾತ್ ನ 6 ಜಿಲ್ಲೆಗಳಲ್ಲಿ ಸಾವಯವ ಕೃಷಿಯನ್ನು ಕೇಳುವವರೇ ಇಲ್ಲದಂತಾಗಿದೆ.

ಅಂಕಿ-ಅಂಶಗಳ ಪ್ರಕಾರ ಗುಜರಾತ್ ನಲ್ಲಿ 6 ವರ್ಷಗಳ ಅವಧಿಯಲ್ಲಿ ಸಾವಯವ ಕೃಷಿ ಮಾಡುವ ಭೂಮಿ ಒಂದೇ ಒಂದು ಇಂಚಿನಷ್ಟು ವಿಸ್ತರಿಸಿಲ್ಲ. ಪ್ರತಿ ವರ್ಷವೂ ಸರ್ಕಾರ ಸಾವಯವ ಕೃಷಿಗಾಗಿ ಬಜೆಟ್ ನ್ನು ಘೋಷಿಸುತ್ತದೆ ಆದರೆ ರೈತರನ್ನು ಉತ್ತೇಜಿಸುವಲ್ಲಿ ವಿಫಲವಾಗುತ್ತದೆ.

ಗುಜರಾತ್ ನಲ್ಲಿ 960,000 ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿದೆ ಈ ಪೈಕಿ 32,092.51 ಹೆಕ್ಟೇರ್ ಭೂಮಿಯಲ್ಲಿ ಮಾತ್ರ ಸಾವಯವ ಪದ್ಧತಿಯ ಕೃಷಿ ಚಟುವಟಿಕೆಗಳು ನಡೆಯುತ್ತಿವೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ,  2014-15 ಅವಧಿಯಲ್ಲಿ ಸಾವಯವ ಕೃಷಿಯನ್ನು 30,092 ಹೆಕ್ಟೇರ್ ಭೂಮಿಯಲ್ಲಿ ಮಾಡಲಾಗುತ್ತಿತ್ತು. ಈ ಪ್ರಮಾಣ 2015-16 ರಲ್ಲಿ 2,000 ಹೆಕ್ಟೇರ್ ಗಳಿಗೆ ಏರಿಕೆಯಾಯಿತು.  2016 ರಿಂದ 2022 ವರೆಗೆ ಕೃಷಿ ಭೂಮಿಯಲ್ಲಿ ಸಾವಯವ ಕೃಷಿ ಪದ್ಧತಿ ಬೆಳವಣಿಗೆ ಆಗದೇ ಇರುವುದು ಬೆಳಕಿಗೆ ಬಂದಿದೆ. 

ಕೇಂದ್ರ ಸರ್ಕಾರ ಸಾವಯವ ಕೃಷಿ ಉತ್ತೇಜನಕ್ಕಾಗಿ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ (ಪಿಕೆವಿವೈ) ಯೋಜನೆಯನ್ನು ಜಾರಿಗೊಳಿಸಿದೆ.  ಗುಜರಾತ್ ರಾಜ್ಯ ತನ್ನದೇ ಆದ ಸಾವಯವ ಕೃಷಿ ಕಾರ್ಯನೀತಿಯನ್ನು ಅಳವಡಿಸಿಕೊಂಡಿದೆ. ಆದರೆ ರೈತರನ್ನು ಅದರೆಡೆಗೆ ಆಕರ್ಷಿಸಲು ವಿಫಲವಾಗಿದೆ.

ಪಿಕೆವಿವೈ ಅಡಿಯಲ್ಲಿ ದೇಶಾದ್ಯಂತ 10,27,865  ಮಂದಿ ಸಾವಯವ ಕೃಷಿಕರಿದ್ದು, ಗುಜರಾತ್ ನ ಕೃಷಿಕರ ಹೆಸರು ದಾಖಲಾಗಿಲ್ಲ. 2023 ರ ಮಾ.21 ರಂದು ಲೋಕಸಭೆಗೆ ಕೇಂದ್ರ ನೀಡಿದ ಉತ್ತರದಲ್ಲಿ,  ಪಿಎಂಕೆವೈ ಅನುದಾನಗಳನ್ನು ಬಳಕೆ ಮಾಡಿಕೊಳ್ಳುವಲ್ಲಿ ನಿಧಾನಗತಿಯ ಪ್ರಗತಿ ಹೊಂದಿದ್ದಕ್ಕಾಗಿ ಕೇಂದ್ರ 2021-22 ರ ಅವಧಿಯಲ್ಲಿ ಗುಜರಾತ್ ಗೆ ಯಾವುದೇ ರೀತಿಯ ಅನುದಾನವನ್ನೂ ನೀಡಿಲ್ಲ.

6 ವರ್ಷಗಳ ಹಿಂದೆ ಗುಜರಾತ್ ನೈಸರ್ಗಿಕ ಕೃಷಿ ಹಾಗೂ ಸಾವಯವ ಕೃಷಿ ವಿವಿಯನ್ನು ರಾಜ್ಯ ಸರ್ಕಾರದಿಂದ ಸ್ಥಾಪಿಸಿ, ಆ ಮೂಲಕ ಕೃಷಿಕರನ್ನು ಹೆಚ್ಚು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸುವ ಉದ್ದೇಶವನ್ನು ಹೊಂದಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT