ಒಡಿಶಾ ರೈಲು ಅಪಘಾತ 
ದೇಶ

ಮಾನವ ಲೋಪವೇ ಒಡಿಶಾ ರೈಲು ಅವಘಡಕ್ಕೆ ಕಾರಣ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ

291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

ಭುವನೇಶ್ವರ: 291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ಸಲ್ಲಿಸಿರುವ ತನಿಖಾ ವರದಿಯಲ್ಲಿ ಸಿಬ್ಬಂದಿಗಳ ಮಾನವ ಲೋಪವೇ ಕಾರಣ ಎಂದು ಉಲ್ಲೇಖಿಸಿದೆ ಎಂದು ಹೇಳಲಾಗಿದೆ. ಸಿಗ್ನಲ್‌, ಟೆಲಿಕಾಂ ಇಲಾಖೆ ಮತ್ತು ಸ್ಟೇಷನ್‌ ಕಾರ್ಯಾಚರಣೆ (ಟ್ರಾಫಿಕ್) ಇಲಾಖೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ತಪ್ಪಿನಿಂದಲೇ ದುರಂತ ಸಂಭವಿಸಿದೆ ವರದಿಯಲ್ಲಿ ಶಂಕಿಸಲಾಗಿದೆ.

ಆಗ್ನೇಯ ರೈಲ್ವೆ ಸಿಆರ್‌ಎಸ್‌ ಎ.ಕೆ.ಚೌಧರಿ ಅವರು ರೈಲ್ವೆ ಮಂಡಳಿಗೆ ಗುರುವಾರ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿನ ಪ್ರಮುಖಾಂಶಗಳು ಬಹಿರಂಗವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 'ಸಿಗ್ನಲ್‌ ವಿಭಾಗದ ಸಿಬ್ಬಂದಿ ದೋಷಯುಕ್ತ ಸಿಗ್ನಲ್ ವ್ಯವಸ್ಥೆಯನ್ನು ಸರಿಪಡಿಸಿದ್ದರು. ಆದರೆ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನದ (ಎಸ್‌ಒಪಿ) ಅನುಸಾರ ಮಾರ್ಗಸೂಚಿ ಪಾಲನೆ ಮಾಡುವಲ್ಲಿ ವಿಫಲರಾಗಿದ್ದರು ಎಂದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಗ್ನಲ್‌ ವ್ಯವಸ್ಥೆ ಸರಿಪಡಿಸಲು ನಿರ್ವಾಹಕ ‘ಸಂಪರ್ಕ ಕಡಿತ’ಕ್ಕೆ ಸ್ಟೇಷನ್‌ ಮಾಸ್ಟರ್‌ಗೆ ಮನವಿ ಸಲ್ಲಿಸಿದ್ದರು. ಕೆಲಸ ಪೂರ್ಣಗೊಂಡ ನಂತರ ಪುನಃ ಸಂಪರ್ಕ ಕಲ್ಪಿಸುವ ಸುತ್ತೋಲೆಯನ್ನೂ ಹೊರಡಿಸಲಾಗಿತ್ತು (ಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ ಸಿಗ್ನಲ್‌ ವ್ಯವಸ್ಥೆ ಸಹಜವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರ್ಥ). ಆದರೆ ಈ ಮಾರ್ಗವಾಗಿ ರೈಲು ಹಾದು ಹೋಗುವ ಮೊದಲು ಸುರಕ್ಷತಾ ಕ್ರಮವಾಗಿ ಸಿಗ್ನಲ್‌ ವ್ಯವಸ್ಥೆ ಪರೀಕ್ಷಿಸಿರಲಿಲ್ಲ. ಹೀಗಾಗಿ ಭೀಕರ ದುರಂತಕ್ಕೆ ಸಿಗ್ನಲ್‌, ಟೆಲಿಕಾಂ ಇಲಾಖೆ ಮತ್ತು ಸ್ಟೇಷನ್‌ ಕಾರ್ಯಾಚರಣೆ ಸಿಬ್ಬಂದಿಯೇ ನೇರ ಹೊಣೆ ಎಂದು ವರದಿ ತಿಳಿಸಿದೆ.

ಹಾಗೆಯೇ ಸಿಬ್ಬಂದಿಗಳ ನಿರ್ಲಕ್ಷ್ಯ ಅಥವಾ ಉದ್ದೇಶಪೂರ್ವಕವಾಗಿ ಅಪಘಾತ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ, ಪ್ರಕರಣದ ಕುರಿತ ಸಿಬಿಐ ತನಿಖೆ ಮೇಲೆ ಯಾವುದೇ ‘ಪ್ರಭಾವ ಅಥವಾ ಹಸ್ತಕ್ಷೇಪ’ ಉಂಟಾಗದಿರಲಿ ಎಂಬ ಉದ್ದೇಶದಿಂದ ತ್ರಿವಳಿ ರೈಲು ದುರಂತ ಕುರಿತ ಸಿಆರ್‌ಎಸ್‌ ತನಿಖಾ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸದೇ ಇರಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಆದರೆ ಅದಾಗಲೇ ಮಾಧ್ಯಮಗಳಲ್ಲಿ ವರದಿಯ ಪ್ರಮುಖಾಂಶಗಳು ಪ್ರಸಾರವಾಗಿದ್ದು, ಈ ವರದಿ ಕುರಿತು ಪ್ರತಿಕ್ರಿಯೆ ನೀಡಲು ಮಂಡಳಿಯ ವಕ್ತಾರರು ನಿರಾಕರಿಸಿದ್ದಾರೆ.

ಕೋರೊಮಂಡಲ್‌ ಎಕ್ಸ್‌ಪ್ರೆಸ್‌ ರೈಲು, ಯಶವಂತಪುರ–ಹೌರಾ ಎಕ್ಸ್‌ಪ್ರೆಸ್‌ ರೈಲು ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ಜೂನ್‌ 2ರಂದು ಸಂಭವಿಸಿದ ಅಪಘಾತದಲ್ಲಿ 291 ಮಂದಿ ಮೃತಪಟ್ಟು, 1200ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ದುರಂತದ ನಂತರ ಆಗ್ನೇಯ ರೈಲ್ವೆ ಹಲವು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT