ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ 
ದೇಶ

ಮಣಿಪುರ ಹಿಂಸಾಚಾರದಲ್ಲಿ ಹೊರ ಶಕ್ತಿಗಳ ಕೈವಾಡ ಅಲ್ಲಗಳೆಯುವಂತಿಲ್ಲ: ಸಿಎಂ ಬಿರೇನ್ ಸಿಂಗ್

ಕಳೆದೊಂದು ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ಹೊರ ಶಕ್ತಿಗಳ ಕೈವಾಡವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.

ಇಂಫಾಲ್: ಕಳೆದೊಂದು ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ಹೊರ ಶಕ್ತಿಗಳ ಕೈವಾಡವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜಕೀಯ ಕೈವಾಡವಿದೆ. ಬಿಜೆಪಿ ಕಚೇರಿ ಮೇಲಿನ ದಾಳಿ ಯತ್ನ ಸಾರ್ವಜನಿಕರಿಂದ ಆಗಿಲ್ಲ, ರಾಜಕೀಯವಾಗಿ ನಡೆದಿದೆ. ಇಂತಹ ನಿರ್ಣಾಯಕ ಸಮಯದಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುವವರನ್ನು ದೇವರು ಎಂದಿಗೂ ಕ್ಷಮಿಸುವುದಿಲ್ಲ. ಮನುಷ್ಯರ ಬದುಕನ್ನು ಇಟ್ಟುಕೊಂಡು ರಾಜಕೀಯ ಮಾಡಬಾರದು ಎಂದರು. 

ಶಾಂತಿಯನ್ನು ಮರುಸ್ಥಾಪಿಸಲು  ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ. ಕುಕಿ ಸಹೋದರರು ಮತ್ತು ಸಹೋದರಿಯರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಎಲ್ಲವನ್ನೂ ಕ್ಷಮಿಸಿ ಮರೆತುಬಿಡೋಣ; ಎಂದಿನಂತೆ ಸಮನ್ವತೆಯೊಂದಿಗೆ ಒಟ್ಟಿಗೆ ಬದುಕೋಣ ಎಂದು ಕೇಳಿಕೊಂಡಿದ್ದೇನೆ. ಮಣಿಪುರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವವರ ತಪಾಸಣೆಗೆ ಸರ್ಕಾರ ಪ್ರಯತ್ನಿಸುತ್ತಿದೆ. ಪರಿಸ್ಥಿತಿ ಸುಧಾರಿಸುವವರೆಗೂ ಅವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ. ಮಣಿಪುರದಲ್ಲಿ ಶಾಂತಿ ಮತ್ತು  ಸಹಜ ಪರಿಸ್ಥಿತಿ  ಮರಳಿ ತರುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. 

ರಾಜ್ಯದ ಜನರಿಗೆ ವೈಯಕ್ತಿಕ ಸಂದೇಶ ನೀಡಿದ ಸಿಎಂ ಬಿರೇನ್ ಸಿಂಗ್, ನಾವೆಲ್ಲರೂ ಒಂದೇ. ಮಣಿಪುರ ಸಣ್ಣ ರಾಜ್ಯ ಆದರೆ, ನಮ್ಮಲ್ಲಿ ಬುಡಕಟ್ಟುಗಳಿವೆ. ಈ ಎಲ್ಲಾರು ಒಟ್ಟಾಗಿ ಬದುಕಬೇಕಾಗಿದೆ. ಹೊರಗಿನಿಂದ ಹೆಚ್ಚು ಜನರು ಬಂದು ಇಲ್ಲಿ ನೆಲೆಸದಂತೆ ಎಚ್ಚರ ವಹಿಸಬೇಕು. ರಾಜ್ಯ ಒಡೆಯಲು ಅಥವಾ ಪ್ರತ್ಯೇಕ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡುತ್ತೇನೆ. ಎಲ್ಲರನ್ನೂ ಒಂದಾಗಿ ಇಡಲು ತ್ಯಾಗ ಮಾಡುತ್ತೇನೆ ಮತ್ತು ರಾಜ್ಯದ ಜನರ ಕಾರಣದಿಂದಾಗಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT