ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮೀಣ ಚುನಾವಣೆ ವೇಳೆ ಹಿಂಸಾಚಾರ; ಟಿಎಂಸಿ ಕಾರ್ಯಕರ್ತ ಸಾವು!

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತ ಸಾವನ್ನಪ್ಪಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತ ಸಾವನ್ನಪ್ಪಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.

52 ವರ್ಷದ ಜಿಯಾರುಲ್ ಮೊಲ್ಲಾಹ್ ಎಂದು ಗುರುತಿಸಲಾದ ಟಿಎಂಸಿ ಕಾರ್ಯಕರ್ತನನ್ನು ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿಯ ಫುಲ್ಮಲಾಂಚಾ ಪ್ರದೇಶದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಗುಂಡಿಕ್ಕಿ ಹತ್ಯೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ನಾಯಕರೊಬ್ಬರು ಟಿಎಂಸಿ ನಾಯಕ ಅಮರುಲ್ ಲಸ್ಕರ್ ಅವರ ಆಪ್ತ ಸಹಾಯಕರಾಗಿದ್ದ ಮೊಲ್ಲಾ ಅವರು ಆಡಳಿತ ಪಕ್ಷದೊಳಗಿನ ಆಂತರಿಕ ಕಲಹಕ್ಕೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಕಥಲಬೇರಿಯಾ ಗ್ರಾಮ ಪಂಚಾಯಿತಿಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿರುವ ಮೊಲ್ಲಾ ಅವರ ಪುತ್ರಿ ಮನ್ವಾರ ತಮ್ಮ ತಂದೆ ರಾಜಕೀಯ ತೊರೆಯುವಂತೆ ಬೆದರಿಕೆ ಇತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಟಿಎಂಸಿ ಶಾಸಕ ಶೋಕತ್ ಮೊಲ್ಲಾ ಮಾತನಾಡಿ, ಪೊಲೀಸರು ಈ ಬಗ್ಗೆ ತನಿಖೆ ನಡೆಸಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು. ಪೊಲೀಸ್ ವರದಿಗಳ ಪ್ರಕಾರ, ಜೂನ್ 9ರಂದು ಗ್ರಾಮೀಣ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT