ವಿಪಕ್ಷಗಳ ನಾಯಕರ ಸಭೆ(ಸಂಗ್ರಹ ಚಿತ್ರ) 
ದೇಶ

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ರಚಿಸಲು ಎಲ್ಲಾ ವಿಪಕ್ಷಗಳ ತಂತ್ರ: ಜುಲೈ 17-18ರಂದು ಸಭೆ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

ಇದೀಗ ಎರಡನೇ ಸುತ್ತಿನ ಸಭೆಯನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆಸಲು ವಿಪಕ್ಷಗಳ ನಾಯಕರು ಮುಂದಾಗಿದ್ದು ಆರಂಭದಲ್ಲಿ ಜುಲೈ 13 ಮತ್ತು 14ರಂದು ಸಭೆ ದಿನಾಂಕಗಳು ನಿಗದಿಯಾಗಿದ್ದವು. ಆದರೆ ಅದನ್ನು ಮುಂದೂಡಿ ಇದೀಗ ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಫ್ಯಾಸಿಸ್ಟ್ ಮತ್ತು ಅಪ್ರಜಾಸತ್ತಾತ್ಮಕ ಶಕ್ತಿಗಳನ್ನು ಸೋಲಿಸಲು ಮತ್ತು ದೇಶವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲು ನಮ್ಮ ಸಂಕಲ್ಪದಲ್ಲಿ ಅಚಲರಾಗಿದ್ದೇವೆ ಎಂದು ವೇಣುಗೋಪಾಲ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT