ಮಲ್ಲಿಕಾರ್ಜುನ ಖರ್ಗೆ 
ದೇಶ

ಮೋದಿ ಸರ್ಕಾರಕ್ಕೆ ಪಕ್ಷಗಳನ್ನು ಒಡೆಯಲು ಸಮಯವಿದೆ, ಸಶಸ್ತ್ರ ಪಡೆಗಳಲ್ಲಿನ ಪ್ರಮುಖ ಹುದ್ದೆಗಳನ್ನು ತುಂಬಲು ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಸೇನೆಯಲ್ಲಿ ಮೇಜರ್ ಮತ್ತು ಕ್ಯಾಪ್ಟನ್ ಮಟ್ಟದ ಅಧಿಕಾರಿಗಳ ಕೊರತೆ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಸೇನೆಯಲ್ಲಿ ಮೇಜರ್ ಮತ್ತು ಕ್ಯಾಪ್ಟನ್ ಮಟ್ಟದ ಅಧಿಕಾರಿಗಳ ಕೊರತೆ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದು, ರಾಜಕೀಯ ಪಕ್ಷಗಳನ್ನು ಒಡೆಯಲು ಮೋದಿ ಸರ್ಕಾರಕ್ಕೆ ಸಮಯವಿದೆ ಆದರೆ, ಸಶಸ್ತ್ರ ಪಡೆಗಳಲ್ಲಿನ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲು ಸಮಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ ಅವರು ಮಾಧ್ಯಮ ವರದಿಯನ್ನು ಹಂಚಿಕೊಂಡಿದ್ದು, ಸೇನೆಯು ಮೇಜರ್ ಮತ್ತು ಕ್ಯಾಪ್ಟನ್ ಮಟ್ಟದಲ್ಲಿ ಅಧಿಕಾರಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ ಮತ್ತು ಘಟಕಗಳಲ್ಲಿನ ಕೊರತೆಯನ್ನು ನೀಗಿಸಲು ವಿವಿಧ ಪ್ರಧಾನ ಕಚೇರಿಗಳಲ್ಲಿ ಸಿಬ್ಬಂದಿ ಅಧಿಕಾರಿಗಳ ಪೋಸ್ಟಿಂಗ್ ಅನ್ನು ಕಡಿಮೆ ಮಾಡಲು ಯೋಜಿಸುತ್ತಿದೆ ಎಂದು ಹೇಳಿದ್ದಾರೆ.

ವರದಿಯ ಪ್ರಕಾರ, ಅಂತಹ ಹುದ್ದೆಗಳಿಗೆ ಮರು ನೇಮಕಗೊಂಡ ಅಧಿಕಾರಿಗಳನ್ನು ನೇಮಿಸುವ ಬಗ್ಗೆಯೂ ಸೇನೆಯು ಪರಿಗಣಿಸುತ್ತಿದೆ ಎನ್ನಲಾಗಿದೆ.

'ಮೋದಿ ಸರ್ಕಾರಕ್ಕೆ ರಾಜಕೀಯ ಪಕ್ಷಗಳನ್ನು ಒಡೆಯಲು ಸಮಯವಿದೆ. ಆದರೆ, ಸಶಸ್ತ್ರ ಪಡೆಗಳಲ್ಲಿನ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲು ಸಮಯವಿಲ್ಲ. ಪ್ರತಿದಿನ 'ರಾಷ್ಟ್ರೀಯತೆ' ಎಂದು ಕಹಳೆ ಊದುವವರು ನಮ್ಮ ಸಶಸ್ತ್ರ ಪಡೆಗಳಿಗೆ ಇನ್ನಿಲ್ಲದಂತೆ ದ್ರೋಹ ಮಾಡಿದ್ದಾರೆ' ಎಂದು ಖರ್ಗೆ ಹೇಳಿದರು.

ಸದ್ಯ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಮೋದಿ ಸರ್ಕಾರದ ಬಳಿ ದೇಶದ ಸೈನಿಕರಿಗೆ ಹಣವಿಲ್ಲ ಎಂಬುದನ್ನು ಅಗ್ನಿಪಥ ಯೋಜನೆ ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಖರ್ಗೆ ಪ್ರತಿಪಾದಿಸಿದರು.

ಒಆರ್‌ಒಪಿ ಅನುಷ್ಠಾನದಲ್ಲಿ ಮೋದಿ ಸರ್ಕಾರ ರಕ್ಷಣಾ ಸಮುದಾಯಕ್ಕೆ ದ್ರೋಹ ಬಗೆದಿದೆ ಮತ್ತು ಒಆರ್‌ಒಪಿ-2 ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳನ್ನು ಎಸಗುವ ಮೂಲಕ ನಮ್ಮ ವೀರ ಸೈನಿಕರ ನಡುವೆ ವಿಭಜನೆಯನ್ನು ಸೃಷ್ಟಿಸಿದೆ. ಮೋದಿ ಸರ್ಕಾರ ಮತ್ತು ಬಿಜೆಪಿಗೆ ರಾಷ್ಟ್ರೀಯ ಭದ್ರತೆ ಆದ್ಯತೆಯಲ್ಲ. ಜನಾದೇಶವನ್ನು ಮೋಸಗೊಳಿಸುವುದು ಅವರ ಆದ್ಯತೆ' ಎಂದು ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!