ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಪೊಲೀಸರ ಕಸ್ಟಡಿಯಲ್ಲಿದ್ದ 28 ವರ್ಷದ ಸಾಜಿದ್ ಅಬ್ಬಾಸಿ ಸಾವು!

28 ವರ್ಷದ ಕೂಲಿ ಕಾರ್ಮಿಕ ಸಾಜಿದ್ ಅಬ್ಬಾಸಿ ಎಂಬಾತ ಪೊಲೀಸರು ಥಳಿಸಿದ ಕಾರಣ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಲಖನೌ: 28 ವರ್ಷದ ಕೂಲಿ ಕಾರ್ಮಿಕ ಸಾಜಿದ್ ಅಬ್ಬಾಸಿ ಎಂಬಾತ ಪೊಲೀಸರು ಥಳಿಸಿದ ಕಾರಣ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಪಶ್ಚಿಮ ಯುಪಿಯ ಬಾಗ್‌ಪತ್ ಜಿಲ್ಲೆಯ ರತೌಲ್ ಗ್ರಾಮದ ಸಂತ್ರಸ್ತ, ಜೂಜಾಟದ ಶಂಕೆಯ ಮೇಲೆ ಆತನನ್ನು ಎತ್ತಿಕೊಂಡು ಬಂದ ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ ಅರ್ಧ ಗಂಟೆಯ ನಂತರ ಸಾವನ್ನಪ್ಪಿದ್ದನು. ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ತನ್ನ ಮಗನನ್ನು ಪೊಲೀಸರು ಭೀಕರವಾಗಿ ಥಳಿಸಿದ್ದಾರೆ. ಬಿಡುಗಡೆ ವೇಳೆ ಆತನ ಸ್ಥಿತಿ ಗಂಭೀರವಾಗಿತ್ತು ಎಂದು ಸಾಜಿದ್ ತಂದೆ ಬಾಬು ಅಬ್ಬಾಸಿ ಹೇಳಿದ್ದಾರೆ.

ಮೂವರು ಪೊಲೀಸ್ ಪೇದೆಗಳು ಆತನನ್ನು ನಿರ್ದಯವಾಗಿ ಥಳಿಸುತ್ತಿರುವುದನ್ನು ಗ್ರಾಮಸ್ಥರು ಸಹ ನೋಡಿದ್ದಾರೆ ಎಂದು ತಂದೆ ಹೇಳಿದರು. ಸಾಜಿದ್ ನಿಧನದಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು.

ಮೃತನ ಕುಟುಂಬ ಮತ್ತು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ಕೈಗೊಳ್ಳುವ ಭರವಸೆ ನೀಡಿದ ನಂತರ ಸಮಾಧಾನಗೊಂಡರು ಎಂದು ಬಾಗ್‌ಪತ್ ಎಸ್ ಪಿ ಅರ್ಪಿತ್ ವಿಜಯವರ್ಗಿಯ ಹೇಳಿದ್ದಾರೆ. 

ಜೂಜಾಟದ ಶಂಕೆಯ ಮೇರೆಗೆ ಆತನನ್ನು ಬಂಧಿಸಲಾಗಿತ್ತು ಆದರೆ ಆತನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ನಂತರ ಬಿಡುಗಡೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಕುಟುಂಬವು ಯಾವುದೇ ದೂರು ನೀಡದ ಕಾರಣ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದದಾರೆ. ಘಟನೆಯ ಬಗ್ಗೆ ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ. ಶವಪರೀಕ್ಷೆಯ ನಂತರವೇ ಸಾವಿನ ಕಾರಣವನ್ನು ಸ್ಪಷ್ಟಪಡಿಸಲಾಗುವುದು ಎಂದು ಬಾಗ್‌ಪತ್ ಎಎಸ್ಪಿ ಮನೀಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT