ಮಮತಾ ಬ್ಯಾನರ್ಜಿ 
ದೇಶ

ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

ಪಂಚಾಯತ್ ಚುನಾವಣೆಗೆ ಮುನ್ನ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸುಳ್ಳಿನ ಬಗ್ಗೆ ಜನರಿಗೆ ಅರಿವಾಗಿರುವುದರಿಂದ ಅದರ 'ಡಬಲ್-ಎಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಪಂಚಾಯತ್ ಚುನಾವಣೆಗೆ ಮುನ್ನ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸುಳ್ಳಿನ ಬಗ್ಗೆ ಜನರಿಗೆ ಅರಿವಾಗಿರುವುದರಿಂದ ಅದರ 'ಡಬಲ್-ಎಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ ಎಂದು ಹೇಳಿದ್ದಾರೆ.

'ಬಿಜೆಪಿಯ ಅವಧಿ ಮುಗಿಯುತ್ತಿದೆ; 'ಡಬಲ್-ಇಂಜಿನ್' ಸರ್ಕಾರದ ಪರಿಕಲ್ಪನೆಯು ಹಳಿತಪ್ಪಿದೆ. ಅವರು ಮತ್ತೊಮ್ಮೆ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ಆದರೆ, ಈ ಬಾರಿ ಅವರ ಸುಳ್ಳುಗಳ ಬಗ್ಗೆ ಜನರಿಗೆ ತಿಳಿದಿದೆ' ಎಂದು ಅವರು ಹೇಳಿದರು.

ಎಲ್‌ಪಿಜಿ ಬೆಲೆ ಏರಿಕೆ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 1,200 ರೂ. ಗೆ ಏರಿಸಿರುವುದನ್ನು ಕಂಡು ನಾನು ನಿರಾಶೆಗೊಂಡಿದ್ದೇನೆ. ಆದರೆ, ಚುನಾವಣಾ ಸಮಯದಲ್ಲಿ ಅವರು ಸೋಪ್ ನೀಡುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ' ಎಂದರು.

ಸೋಮವಾರ ಬಿರ್‌ಭೂಮ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಿಧಿಯ ಸಹಾಯದಿಂದ ಬಾಮ್-ರಾಮ್-ಶ್ಯಾಮ್ ನಮ್ಮ ವಿರುದ್ಧ ಕೈಜೋಡಿಸಿದ್ದಾರೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

ಅಲ್ಪಸಂಖ್ಯಾತರಿಗಾಗಿ ಐಕ್ಯಶ್ರೀ ಅಥವಾ ಮೇಧಾಶ್ರೀ ವಿದ್ಯಾರ್ಥಿವೇತನಗಳಂತಹ ನಾವು ವಿಶೇಷ ಸವಲತ್ತುಗಳನ್ನು ಪರಿಚಯಿಸಿದ್ದೇವೆ. ಈಮಧ್ಯೆ, ಕೇಂದ್ರವು ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನವನ್ನು ನೀಡುವುದನ್ನು ನಿಲ್ಲಿಸಿದೆ. ಆದರೆ, ನಾವು ಅವುಗಳನ್ನು ನಮ್ಮ ಮೇಧಾಶ್ರೀ ಯೋಜನೆಯ ಮೂಲಕ ಮುಂದುವರಿಸುತ್ತಿದ್ದೇವೆ ಎಂದು ಬ್ಯಾನರ್ಜಿ ಹೇಳಿದರು.

ಅನುಬ್ರತಾ ಮೊಂಡಲ್ ಮತ್ತು ಅವರ ಪುತ್ರಿ ಸುಕನ್ಯಾ ಅವರನ್ನು ಬಂಧಿಸಿದ್ದಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 'ಬಿರ್‌ಭೂಮ್‌ನಲ್ಲಿ ಅನುಬ್ರತಾ ಮೊಂಡಲ್ ಮತ್ತು ಅವರ ಪುತ್ರಿ ಸುಕನ್ಯಾ ಅವರನ್ನು ಕಂಬಿ ಹಿಂದೆ ಹಾಕಲಾಗಿದೆ. ಒಂದು ವೇಳೆ ತಪ್ಪಿತಸ್ಥರಾಗಿದ್ದರೆ, ಬಿಜೆಪಿಯ ಕೇಂದ್ರದ ತನಿಖಾ ಸಂಸ್ಥೆಗಳು ಏಕೆ ಅದನ್ನು ಸಾಬೀತು ಪಡಿಸಬಾರದು? ಸಾಬೀತುಪಡಿಸಲು ಸಾಧ್ಯವಾಗದೆ ಅನುಬ್ರತಾ ಮೊಂಡಲ್ ಅವರನ್ನು ತೃಣಮೂಲಕ್ಕಾಗಿ ಕೆಲಸ ಮಾಡದಂತೆ ಬಂಧಿಸಿ ಪಂಚರಾಜ್ಯ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ. ಆದರೆ ಇದೀಗ ಬಿಜೆಪಿಯಲ್ಲಿರುವ ದೇಶದ್ರೋಹಿ ವಿರುದ್ಧ ಯಾರು ಕ್ರಮ ತೆಗೆದುಕೊಳ್ಳುತ್ತಾರೆ? ಬಿಜೆಪಿಯ ಅವಧಿ ಮುಗಿಯುತ್ತಿದೆ ಎಂದು ಅವರು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT