ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ನನ್ನ ಫೋಟೋ ಬಳಸಬೇಡಿ: ಅಜಿತ್ ಟೀಮ್ ಗೆ ಶರದ್ ಪವಾರ್ ಸೂಚನೆ

ತನ್ನ ಸಿದ್ಧಾಂತಕ್ಕೆ "ದ್ರೋಹ" ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಮುಂಬೈ: ತನ್ನ ಸಿದ್ಧಾಂತಕ್ಕೆ "ದ್ರೋಹ" ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷಯಾಗಿದ್ದು, ಜಯಂತ್ ಪಾಟೀಲ್ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಮಾತ್ರ ನನ್ನ ಫೋಟೋ ಬಳಸಬಹುದು ಎಂದರು. 

ತಮ್ಮ ಜೀವಿತಾವಧಿಯಲ್ಲಿ ಯಾರು ಫೋಟೋ  ಬಳಸಬೇಕು ಎಂಬುದನ್ನು ನಿರ್ಧರಿಸುವುದು ತನ್ನ ವಿಶೇಷಾಧಿಕಾರವಾಗಿದೆ. "ನನ್ನ ಸಿದ್ಧಾಂತಕ್ಕೆ ದ್ರೋಹ ಮಾಡಿದವರು ಮತ್ತು ನನ್ನೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರುವವರು .ಯಾವುದೇ ಕಾರಣಕ್ಕೂ ತನ್ನ ಫೋಟೋ  ಬಳಸುವಂತಿಲ್ಲ ಎಂದು ಅವರು ಹೇಳಿದರು.

ಪವಾರ್ ಅವರ ಸಂಬಂಧಿ ಅಜಿತ್ ಪವಾರ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಇತರ ಎಂಟು ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಸೇರಿದ ಎರಡು ದಿನಗಳ ನಂತರ ಪವಾರ್ ಈ ರೀತಿ ಹೇಳಿಕೆ ನೀಡಿದ್ದಾರೆ.

ಅಜಿತ್‌ ಪವಾರ್‌ ಬಣ ಜಯಂತ್‌ ಪಾಟೀಲ್‌ ಅವರನ್ನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ. ಮತ್ತೊಂದೆಡೆ ಪಾಟೀಲ್ ಅವರು ಅಜಿತ್ ಮತ್ತು ಅವರ ಸಹಚರರನ್ನು ಅನರ್ಹಗೊಳಿಸುವಂತೆ ಕೋರಿ ವಿಧಾನಸಭಾ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT