ಬಂಡಾಯ ನಾಯಕನ ಮನೆಗೆ ಬೆಂಕಿ 
ದೇಶ

ಮಣಿಪುರ: ಹೆದ್ದಾರಿ ದಿಗ್ಬಂದನ ತೆರವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಂಡಾಯ ನಾಯಕನ ಮನೆಗೆ ಬೆಂಕಿ!

ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಜಾರಿಗೊಳಿಸಲಾಗಿದ್ದ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಒಂದು ದಿನದ ನಂತರ ಸೋಮವಾರ ರಾತ್ರಿ ಮಣಿಪುರದಲ್ಲಿ ಬಂಡಾಯ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಇಂಫಾಲ್: ಮಣಿಪುರ ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದಿಗ್ಬಂಧನವನ್ನು ಹಿಂತೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಂತಿಯುತ ಮಾರ್ಗದ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಸೋಮವಾರ ಬೆಂಕಿ ಹಚ್ಚಿದ್ದಾರೆ. 

ಚುರಾಚಂದ್‌ಪುರದ ಬೆಟ್ಟದ ಜಿಲ್ಲೆಯಲ್ಲಿರುವ ಕುಕಿ ರಾಷ್ಟ್ರೀಯ ಸಂಘಟನೆಯ ವಕ್ತಾರರಾಗಿರುವ ಡಾ.ಸೈಲೆನ್ ಹಾಕಿಪ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದು ಕೆಲ ಬಂಡಾಯಗಾರರ ಗುಂಪುಗಳ ಸಂಘಟಿತವಾಗಿದೆ. 

ಬೆಂಕಿ ಹೊತ್ತಿಕೊಂಡಾಗ ಮನೆಯಲ್ಲಿ ಯಾರೂ ಇರಲಿಲ್ಲ. ದುಷ್ಕರ್ಮಿಗಳಿಂದ ಈ ದಾಳಿ ನಡೆದಿದೆ ಹೊರತು ಉದ್ರಿಕ್ತ ಜನರಿಂದ ಆಗಿಲ್ಲ ಎಂದು ಹಾಕಿಪ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆನ್ ಲೈನ್ ಗೆ ತಿಳಿಸಿದ್ದಾರೆ. ತನ್ನ ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮೇಸೆಜ್ ಹಾಕಲಾಗುತ್ತಿದೆ ಎಂದು ಹಾಕಿಪ್ ಸ್ಪಷ್ಪಪಡಿಸಿದ ನಂತರ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ. ಅಸ್ಸಾಂ ಮತ್ತು ಭಾರತ ಸರ್ಕಾರದ ಹಿರಿಯ ರಾಜಕೀಯ ಪದಾಧಿಕಾರಿಗಳು ಮತ್ತು ಕುಕಿ ಮುಖಂಡರ ನಡುವಿನ ಗೌಪ್ಯ ಸಭೆಯ ಮಾಹಿತಿ ಇದಾಗಿತ್ತು.

ಕೋಮು ಸೌಹಾರ್ದತೆಗೆ ಅಡ್ಡಿಯುಂಟುಮಾಡುವುದರ ಜೊತೆಗೆ ತಪ್ಪು ತಿಳುವಳಿಕೆ ಮತ್ತು ವಿವಾದವನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿರುವ ಕಾರಣ ಈ ವಿಷಯದ ಬಗ್ಗೆ ನನ್ನ ನಿಲುವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ." ಕುಕಿ ನಾಗರಿಕ ಸಮಾಜ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರು ಆಗಾಗ್ಗೆ ಹಿರಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದು, ಮಣಿಪುರದಲ್ಲಿ ಪ್ರಸ್ತುತ ಇರುವ ಭದ್ರತಾ ಸನ್ನಿವೇಶ ಮತ್ತು ಕುಕಿ-ಝೋ ಮತ್ತು ಮೈಟೈ ಸಮುದಾಯಗಳ ನಡುವೆ ಇರುವ ನಂಬಿಕೆಯ ಕೊರತೆಯ ಬಗ್ಗೆ ತಮ್ಮ ನಿಲುವನ್ನು ತಿಳಿಸಿರುವುದಾಗಿ ಅವರು ಹೇಳಿದರು.

ಕುಕಿಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತಿಳಿದಿದ್ದು, ಸಮಸ್ಯೆಯ ತ್ವರಿತ ಪರಿಹಾರದಲ್ಲಿ ತನ್ನ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT