ಅಜಿತ್ ಪವಾರ್ - ಶರದ್ ಪವಾರ್ 
ದೇಶ

ಪವಾರ್ v/s ಪವಾರ್: ನಾಳೆ ಎನ್‌ಸಿಪಿ ಸಭೆ ಕರೆದ ಇಬ್ಬರೂ ನಾಯಕರು!

ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ...

ಮುಂಬೈ: ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ ಎನ್ ಸಿಪಿ ವರಿಷ್ಠ ಶರದ್ ಪವಾರ್ ಇಬ್ಬರೂ ಬುಧವಾರ ಪಕ್ಷದ ನಾಯಕರ ಸಭೆ ಕರೆದಿದ್ದು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಅಜಿತ್ ಪವಾರ್ ಅವರು ನಾಳೆ ಎಲ್ಲಾ ಎನ್‌ಸಿಪಿ ಸಂಸದರು, ಎಂಎಲ್‌ಎಗಳು, ಎಂಎಲ್‌ಸಿಗಳು, ಜಿಲ್ಲಾ ಮುಖ್ಯಸ್ಥರು ಮತ್ತು ರಾಜ್ಯ ಪ್ರತಿನಿಧಿಗಳ ಸಭೆ ಕರೆದಿದ್ದಾರೆ.

ಜುಲೈ 5 ರಂದು ಎಂಇಟಿ ಬಾಂದ್ರಾದಲ್ಲಿ ಸಭೆಗೆ ಹಾಜರಾಗುವಂತೆ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗರಿಗೆ ಕೇಳಿಕೊಂಡಿದ್ದಾರೆ.

ಅದೇ ಸಮಯದಲ್ಲಿ, ಶರದ್ ಪವಾರ್ ಅವರು ಸಹ ವೈಬಿ ಚವಾಣ್ ಆಡಿಟೋರಿಯಂನಲ್ಲಿ ಎಲ್ಲಾ ಎನ್ ಸಿಪಿ ನಾಯಕರ ಸಭೆ ಕರೆದಿದ್ದಾರೆ. ಎನ್ ಸಿಪಿ ನಾಯಕರು ಯಾರ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆಕಾರಣವಾಗಿದೆ.

ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಅಜಿತ್ ಪವಾರ್ ಅವರು ಭಾನುವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT