ಅಪಘಾತದ ದೃಶ್ಯ 
ದೇಶ

ಭೀಕರ ವಿಡಿಯೋ: ಮಾರ್ನಿಂಗ್ ವಾಕಿಂಗ್ ಮಾಡುತ್ತಿದ್ದವರಿಗೆ ಗುದ್ದಿದ ಕಾರು; ತಾಯಿ-ಮಗಳ ಸಾವು, ಕಾರು ಬಿಟ್ಟು ಚಾಲಕ ಪರಾರಿ

ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು, ಮಾರ್ನಿಂಗ್ ವಾಕಿಂಗ್ ಮಾಡುತ್ತಿದವರಿದೆ ಕಾರು ಗುದ್ದಿದ ಪರಿಣಾಮ ತಾಯಿ-ಮಗಳು ಸಾವನ್ನಪ್ಪಿ ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು, ಮಾರ್ನಿಂಗ್ ವಾಕಿಂಗ್ ಮಾಡುತ್ತಿದವರಿದೆ ಕಾರು ಗುದ್ದಿದ ಪರಿಣಾಮ ತಾಯಿ-ಮಗಳು ಸಾವನ್ನಪ್ಪಿ ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್ ನ ಬಂಡ್ಲಗುಡ ಸನ್ ಸಿಟಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮೂರು ಮಹಿಳೆಯರಿಗೆ ಕಾರು ಗುದ್ದಿದೆ. ಪರಿಣಾಮ ತಾಯಿ-ಮಗಳು ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯರನ್ನು ಅನುರಾಧಾ ಮತ್ತು ಆಕೆಯ ಮಗಳು ಮಮತಾ ಎಂದು ಗುರುತಿಸಲಾಗಿದೆ. ಅವರ ಜೊತೆಯಲ್ಲಿದ್ದ ಇನ್ನೋರ್ವ ಮಹಿಳೆ ಕವಿತಾ ಮತ್ತು ಪುರುಷ ಇಂತಿಖಾಬ್ ಆಲಂ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಪೊಲೀಸರ ಪ್ರಕಾರ, ಬೆಳಗಿನ ವಾಕಿಂಗ್‌ಗೆ ಹೊರಟಿದ್ದಾಗ ಬೆಳಿಗ್ಗೆ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿತ್ತು. ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಚಾಲಕ ಪರಾರಿ
ಅಪಘಾತದ ನಂತರ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.

ಅತಿವೇಗವೇ ಅಪಘಾತಕ್ಕೆ ಕಾರಣ
ಇನ್ನು ಪ್ರತ್ಯಕ್ಷದರ್ಶಿಗಳಾದ ಸ್ಥಳೀಯ ನಿವಾಸಿಗಳ ಪ್ರಕಾರ, ಕಾರು ಅತಿವೇಗವಾಗಿ ಚಲಿಸುತ್ತಿತ್ತು. ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ.  ಈ ವೇಳೆ ಅದೇ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯರ ಗುಂಪಿಗೆ ಗುದ್ದಿದೆ. ಡಿಕ್ಕಿ ಹೊಡೆದ ನಂತರ ಕಾರು ರಸ್ತೆಯಿಂದ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರು ಕಾರು ಮಾಲೀಕರನ್ನು ಪತ್ತೆಹಚ್ಚಲು ಮತ್ತು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT