ಜಗದೀಪ್ ಧನಕರ್ 
ದೇಶ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್

ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.

"ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ" ಎಂದು ಅವರು ಹೇಳಿದರು.

"ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ' ಎಂದು ಧನಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT