ಜಗದೀಪ್ ಧನಕರ್ 
ದೇಶ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್

ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.

"ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ" ಎಂದು ಅವರು ಹೇಳಿದರು.

"ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ' ಎಂದು ಧನಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT