ಅಜಿತ್ ಪವಾರ್ 
ದೇಶ

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್

ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ...

ಮುಂಬೈ: "ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ಮುಂಬೈನ ಬಾಂದ್ರಾದಲ್ಲಿ ತಾವು ಕರೆದಿದ್ದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅಜಿತ್ ಪವಾರ್, 2004ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳನ್ನು ಪಡೆದಿತ್ತು. ಆ ಸಮಯದಲ್ಲಿ ನಾವು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಎನ್ ಸಿಪಿಯವರೇ ಮುಖ್ಯಮಂತ್ರಿಯಾಗಿ ಇರುತ್ತಿದ್ದರು ಎಂದರು.

2017ರಲ್ಲೂ ವರ್ಷಾ ಬಂಗಲೆಯಲ್ಲಿ ಸಭೆ ನಡೆಸಿದ್ದೆವು. ಪಕ್ಷದ ಹಿರಿಯ ನಾಯಕರಾದ ಛಗನ್ ಭುಜಬಲ್, ಜಯಂತ್ ಪಟೇಲ್, ನಾನು ಮತ್ತು ಇನ್ನೂ ಹಲವರು ಅಲ್ಲಿಗೆ ಹೋಗಿದ್ದೆವು. ಬಿಜೆಪಿಯ ಹಲವಾರು ನಾಯಕರು ಸಹ ಅಲ್ಲಿದ್ದರು. ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ಬಗ್ಗೆಯೂ ಚರ್ಚೆ ಆಗಿತ್ತು. ಆದರೆ ನಂತರ ನಮ್ಮ ಪಕ್ಷ ಒಂದು ಹೆಜ್ಜೆ ಹಿಂದಕ್ಕೆ ಸರಿಯಿತು ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಇದೇ ವೇಳೆ 83 ವರ್ಷದ ಶರದ್ ಪವಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಜಿತ್ ಪವಾರ್, "ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟ ನಾಯಕರು ನಿವೃತ್ತರಾಗುತ್ತಾರೆ. ಆದರೆ ನಿಮಗೆ 83 ವರ್ಷ. ನೀವು ಯಾವಾಗ ನಿವೃತ್ತಿಯಾಗುತ್ತೀರಿ?" ಎಂದು ತಮ್ಮ ಚಿಕ್ಕಪ್ಪನನ್ನು ಪ್ರಶ್ನಿಸಿದರು.

"ನೀವು ಎಲ್ಲರ ಮುಂದೆ ನನ್ನನ್ನು ಖಳನಾಯಕನಂತೆ ಬಿಂಬಿಸಿದ್ದೀರಿ. ನನಗೆ ಅವರ(ಶರದ್ ಪವಾರ್) ಬಗ್ಗೆ ಇನ್ನೂ ಆಳವಾದ ಗೌರವವಿದೆ ... ಐಎಎಸ್ ಅಧಿಕಾರಿಗಳು 60ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ... ರಾಜಕೀಯದಲ್ಲಿಯೂ - ಬಿಜೆಪಿ ನಾಯಕರು 75 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರ ಉದಾಹರಣೆಯನ್ನು ನೀವು ನೋಡಬಹುದು ... ಅದು ಹೊಸ ಪೀಳಿಗೆಗೆ ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT