ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ 
ದೇಶ

ಮಣಿಪುರ ಹಿಂಸಾಚಾರ: ಘರ್ಷಣೆಯ ನಂತರ ಐಆರ್‌ಬಿ ಸಿಬ್ಬಂದಿ ಮನೆಗೆ ಬೆಂಕಿ ಹಚ್ಚಿದ ಗುಂಪು

ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಸಿಬ್ಬಂದಿಯ ಮನೆಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಇಂಫಾಲ: ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಸಿಬ್ಬಂದಿಯ ಮನೆಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂದೂಕುಗಳನ್ನು ಲೂಟಿ ಮಾಡಲು 4 ಕಿಮೀ ದೂರದಲ್ಲಿರುವ ವಾಂಗ್ಬಾಲ್‌ನಲ್ಲಿರುವ 3ನೇ ಐಆರ್‌ಬಿ ಶಿಬಿರದ ಮೇಲೆ 700-800 ಜನರ ಗುಂಪು ದಾಳಿ ಮಾಡಲು ಯತ್ನಿಸಿದಾಗ ನಡೆದ ಘರ್ಷಣೆಯಲ್ಲಿ ರೊನಾಲ್ಡೊ ಎಂದು ಗುರುತಿಸಲಾದ 27 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ನಂತರ ಮಂಗಳವಾರ ರಾತ್ರಿ ಸಮರಂನಲ್ಲಿ ಈ ಘಟನೆ ನಡೆದಿದೆ.

ಪಡೆಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದವು ಮತ್ತು ಮೊದಲಿಗೆ ಅಶ್ರುವಾಯು ಶೆಲ್‌ಗಳು ಮತ್ತು ರಬ್ಬರ್ ಬುಲೆಟ್‌ಗಳನ್ನು ಬಳಸಿದವು. ಆದರೆ, ಶಸ್ತ್ರಸಜ್ಜಿತ ಗುಂಪು ಗುಂಡು ಹಾರಿಸಿ ಪಡೆಗಳನ್ನು ಹಿಮ್ಮೆಟ್ಟಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುವರಿ ಪಡೆಗಳು ಅಲ್ಲಿಗೆ ತಲುಪುವುದನ್ನು ತಡೆಯಲು ಗುಂಪು ಶಿಬಿರಕ್ಕೆ ಹೋಗುವ ರಸ್ತೆಗಳನ್ನು ಅನೇಕ ಸ್ಥಳಗಳಲ್ಲಿ ನಿರ್ಬಂಧಿಸಿತು. ಆದರೂ, ಪಡೆಗಳು ಅಲ್ಲಿಗೆ ತೆರಳಿದವು ಎಂದು ಅವರು ಹೇಳಿದರು.

ಶಿಬಿರಕ್ಕೆ ತೆರಳುತ್ತಿದ್ದ ಅಸ್ಸಾಂ ರೈಫಲ್ಸ್ ತಂಡದ ಮೇಲೆ ಗುಂಪು ದಾಳಿ ಮಾಡಿದೆ. ಅವರು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದರು. ಈ ವೇಳೆ ಸೈನಿಕರೊಬ್ಬರು ಗಾಯಗೊಂಡರು ಮತ್ತು ಅವರ ವಾಹನವನ್ನು ಸುಟ್ಟುಹಾಕಿದರು. ಯೋಧನ ಕಾಲಿಗೆ ಗುಂಡೇಟು ತಗುಲಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘರ್ಷಣೆಯಲ್ಲಿ, ರೊನಾಲ್ಡೊ ಎಂದು ಗುರುತಿಸಲಾದ ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಲಾಯಿತು. ಆತನನ್ನು ಮೊದಲು ತೌಬಲ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ನಂತರ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಇಂಫಾಲ್‌ನ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಲಾಯಿತು. ಆದರೆ, ರಾಜ್ಯ ರಾಜಧಾನಿಗೆ ತೆರಳುವ ಮಾರ್ಗದಲ್ಲಿ ಆತ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಇತರ ಹತ್ತು ಮಂದಿ ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ಆರು ಮಂದಿ ಗಂಭೀರ ಗಾಯಗಳೊಂದಿಗೆ ಇಂಫಾಲ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT