ತಬ್ರೇಜ್ ಅನ್ಸಾರಿ 
ದೇಶ

ತಬ್ರೇಜ್ ಅನ್ಸಾರಿ ಹತ್ಯೆ ಪ್ರಕರಣ: ಎಲ್ಲಾ 10 ಅಪರಾಧಿಗಳಿಗೆ ಹತ್ತು ವರ್ಷ ಜೈಲು ಶಿಕ್ಷೆ

ತಬ್ರೇಜ್ ಅನ್ಸಾರಿಯನ್ನು ಥಳಿಸಿ ಕೊಂದ ಪ್ರಕರಣದ ಎಲ್ಲಾ 10 ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಾರ್ಖಂಡ್ ನ ಸೆರೈಕೇಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ರಾಂಚಿ: ತಬ್ರೇಜ್ ಅನ್ಸಾರಿಯನ್ನು ಥಳಿಸಿ ಕೊಂದ ಪ್ರಕರಣದ ಎಲ್ಲಾ 10 ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಾರ್ಖಂಡ್ ನ ಸೆರೈಕೇಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಇದಕ್ಕೂ ಮುನ್ನ ಜೂನ್ 27ರಂದು ಒಟ್ಟು 13 ಆರೋಪಿಗಳ ಪೈಕಿ 10 ಮಂದಿ ದೋಷಿಗಳೆಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಅಮಿತ್ ಶೇಖರ್ ಅವರು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.

ತಬ್ರೇಜ್ ಅನ್ಸಾರಿ ಅವರ ಪತ್ನಿಯನ್ನು ಪ್ರತಿನಿಧಿಸುವ ವಕೀಲರ ಪ್ರಕಾರ, ನ್ಯಾಯಾಲಯವು ಪ್ರತಿಯೊಬ್ಬ ಅಪರಾಧಿಗಳಿಗೆ 23,100 ರೂಪಾಯಿ ದಂಡವನ್ನು ವಿಧಿಸಿದೆ, ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ತಬ್ರೇಜ್ ಅನ್ಸಾರಿ ಅವರ ಪತ್ನಿ ಶಾಹಿಸ್ತಾ ಪರ್ವೀನ್ ಪರ ವಾದ ಮಂಡಿಸಿದ ವಕೀಲ ಅಲ್ತಾಫ್ ಹುಸೇನ್ ಅವರು, ಈ ಶಿಕ್ಷೆಯಿಂದ ತಾವು ತೃಪ್ತರಾಗಿಲ್ಲ. ಈ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

24 ವರ್ಷದ ಅನ್ಸಾರಿ ಅವರನ್ನು 2019ರ ಜೂನ್ 18 ರಂದು ಸೆರೈಕೇಲ ಪೊಲೀಸ್ ಠಾಣಾ ವ್ಯಾಪ್ತಿಯ ಧತ್ ಕಿಡಿಹ್ ಎಂಬಲ್ಲಿ ಮೋಟಾರ್ ಸೈಕಲ್ ಕದ್ದ ಆರೋಪದ ಮೇಲೆ ಕಂಬಕ್ಕೆ ಕಟ್ಟಿಹಾಕಿ 'ಜೈ ಶ್ರೀ ರಾಮ್' ಮತ್ತು 'ಜೈ ಬಜರಂಗ್ ಬಲಿ' ಎಂದು ಘೋಷಣೆ ಕೂಗುತ್ತ ರಾಡ್ ಗಳಿಂದ ಥಳಿಸಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT