ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ 
ದೇಶ

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.

ಪುಣೆ: ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆಗಳನ್ನು ಓದುವಂತೆ ಹೇಳಿದ್ದಕ್ಕಾಗಿ ಮತ್ತು ಬಾಲಕಿಯರ ಶೌಚಾಲಯದ ಹೊರ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಹಲವಾರು ಬಜರಂಗದಳ ಕಾರ್ಯಕರ್ತರು ಶಾಲೆಗೆ ಆಗಮಿಸಿ ಶಾಲಾ ಆವರಣದಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಗೆ ಥಳಿಸಿದ್ದು ಹಲ್ಲೆ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಪೊಲೀಸರು ಈ ಪ್ರಕರಣದಲ್ಲಿ ತಾಳೇಗಾಂವ್ ದಭಾಡೆಯ ಡಿವೈ ಪಾಟೀಲ್ ಪ್ರೌಢಶಾಲೆಯ ಪ್ರಾಚಾರ್ಯ ಅಲೆಕ್ಸಾಂಡರ್ ಕೋಟ್ಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪಾಲಕರು ತಮ್ಮ ಮಕ್ಕಳಿಗೆ ಏಸು ಕ್ರಿಸ್ತ ಪ್ರಾರ್ಥನೆ ಮಾಡುವಂತೆ ಹೇಳುತ್ತಿದ್ದು, ಹಿಂದೂ ಹಬ್ಬ ಹರಿದಿನಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುತ್ತಿಲ್ಲ. ಇದಲ್ಲದೇ ಬಾಲಕಿಯರ ಶೌಚಾಲಯದೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾವು ಅದನ್ನು ವಿರೋಧಿಸಲು ಬಂದಾಗ, ಎಲ್ಲಾ ದೂರುಗಳು ಮಾನ್ಯವಾಗಿವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ಕಾರ್ಯಕರ್ತರೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT