ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ 
ದೇಶ

ಎನ್‌ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ

ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

ನವದೆಹಲಿ: ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

ಶರದ್ ಪವಾರ್ ಅವರು ಕರೆದಿದ್ದ ಕಾರ್ಯಕಾರಿ ಸಮಿತಿ ಸಭೆಯ ನಂತರ ಜನಪಥ್ 6ರಲ್ಲಿರುವ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು, ಸಂಕಷ್ಟದ ಸಮಯದಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾರ್ಯಕಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ತಾವೇ ಎನ್‌ಸಿಪಿ ಅಧ್ಯಕ್ಷರು ಎಂದು ಪ್ರತಿಪಾದಿಸಿದರು.

ನಾನು ಎನ್‌ಸಿಪಿ ಅಧ್ಯಕ್ಷ, ಯಾರಾದರೂ ತಾವು ಎನ್ ಸಿಪಿ ಅಧ್ಯಕ್ಷರು ಎಂದು ಹೇಳಿದರೆ ಅದು ಸಂಪೂರ್ಣ ಸುಳ್ಳು. ಅದರಲ್ಲಿ ಯಾವುದೇ ಸತ್ಯವಿಲ್ಲ. ಯಾರಾದರೂ(ಅಜಿತ್ ಪವಾರ್) ಏನಾದರೂ ಹೇಳಿದರೆ ಅದಕ್ಕೆ ಯಾವುದೇ ಪ್ರಾಮುಖ್ಯತೆ ನೀಡಬೇಡಿ ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT