ಅಮರನಾಥ್ ಯಾತ್ರೆ 
ದೇಶ

ಅಮರನಾಥ ಯಾತ್ರೆ: 2 ದಿನದಲ್ಲಿ 6 ಮಂದಿ ಯಾತ್ರಿಗಳ ಸಾವು, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಪವಿತ್ರ ಅಮರನಾಥ ಯಾತ್ರೆ ವೇಳೆ ಕಳೆದ 48 ಗಂಟೆಗಳ ಅವಧಿಯಲ್ಲಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.

ಡೆಹ್ರಾಡೂನ್: ಪವಿತ್ರ ಅಮರನಾಥ ಯಾತ್ರೆ ವೇಳೆ ಕಳೆದ 48 ಗಂಟೆಗಳ ಅವಧಿಯಲ್ಲಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.

ಕಳೆದ ಎರಡು ದಿನಗಳಲ್ಲಿ ಆರು ಅಮರನಾಥ ಯಾತ್ರಿಗಳು ಸಾವನ್ನಪ್ಪಿದ್ದು, ಈ ವರ್ಷದ ತೀರ್ಥಯಾತ್ರೆಯ ಸಂದರ್ಭದಲ್ಲಿ ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಈ ಪೈಕಿ ಎಂಟು ಯಾತ್ರಿಗಳು ಮತ್ತು ಐಟಿಬಿಪಿ ಸಿಬ್ಬಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮೃತರ ವಿವರಗಳನ್ನು ಮತ್ತು ಸಾವಿನ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಆದರೆ ಪರ್ವತದಲ್ಲಿ ಕಡಿಮೆ ಆಮ್ಲಜನಕದ ಸಾಂದ್ರತೆಯಿಂದ ಪ್ರಚೋದಿಸಲ್ಪಟ್ಟ ಹೃದಯ ಸ್ತಂಭನದಿಂದಾಗಿ ಅಮರನಾಥ ಯಾತ್ರಿಕರು ಸಾವನ್ನಪ್ಪುತ್ತಿದ್ದಾರೆ ಎಂದು ಊಹಿಸಲಾಗಿದೆ. ಈ ಬಗ್ಗೆ ಕರ್ತವ್ಯದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು ಕೂಡ ಇಂತಹುದೇ ಸಾಮಾನ್ಯ ಕಾರಣಗಳಿಂದ ಯಾತ್ರಾರ್ಥಿಗಳು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಿದೆ.

ಇಲ್ಲಿಯವರೆಗೆ, ಯಾತ್ರೆಗೆ ಸಂಬಂಧಿಸಿದ ಒಂಬತ್ತು ಸಾವುಗಳು ಸಂಭವಿಸಿವೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ